ರಸ್ತೆ ಹೊಂಡ ಗುಂಡಿ ಮುಚ್ಚಲು ಬರಲಿದೆ ಹೊಸದಾಗಿ ಸಂಶೋಧನೆಗೊಂಡ ‘ಇಕೋಫಿಕ್ಸ್ ಕೆಮಿಕಲ್ ಪುತ್ತೂರು: ಮಳೆಗಾಲದಲ್ಲಿ ರಸ್ತೆಗಳಲ್ಲಿ ಹೊಂಡ ಗುಂಡಿಗಳು ಬಿದ್ದಿವೆ. ಅದನ್ನು ಖಾಯಂ ಆಗಿ ಮುಚ್ಚುವ ನಿಟ್ಟಿನಲ್ಲಿ ಹೊಸದಾಗಿ ಸಂಶೋಧನೆಗೊಂಡ ಇಕೋಫಿಕ್ಸ್ ಎಂಬ ಕೆಮಿಕಲ್ ಬಂದಿದ್ದು...
“ಶಾರೀರಿಕ ,ಬೌದ್ಧಿಕ ,ಮಾನಸಿಕ ಸ್ವಾಸ್ಥ್ಯಕ್ಕೆ ಯೋಗ ಅತಿ ಅವಶ್ಯಕ”-ಕರುಣಾಕರ ಉಪಾಧ್ಯಾಯ ಬನ್ನೂರು : ಯೋಗ ಎನ್ನುವುದು ಮಾನವನ ಶಾರೀರಿಕ ,ಬೌದ್ಧಿಕ ,ಮತ್ತು ಮಾನಸಿಕ ವಿಕಾಸಕ್ಕೆ ಅತಿ ಅವಶ್ಯಕವಾಗಿದ್ದು .ಅದು ಅತಿ ಹಿಂದಿನ ಕಾಲದಲ್ಲಿ ರೂಢಿಯಲ್ಲಿತ್ತು ಎಂದು...
ಅಬಕಾರಿ ಸನ್ನದುಗಳ ನವೀಕರಣ ಶುಲ್ಕವನ್ನು ಇಳಿಸಿದೆ. ಈ ಮೂಲಕ ಮದ್ಯದಂಗಡಿ ಮಾಲೀಕರ ಒತ್ತಡಕ್ಕೆ ಸರಕಾರ ಮಣಿದಿದೆ. ಅಬಕಾರಿ ಸನ್ನದುಗಳ ನವೀಕರಣ ಶುಲ್ಕವನ್ನು ಸರಕಾರ ಭಾರೀ ದೊಡ್ಡ ಪ್ರಮಾಣದಲ್ಲಿ ಏರಿಕೆ ಮಾಡಿತ್ತು. ಇದರಿಂದ ಮದ್ಯದಂಗಡಿ ಮಾಲೀಕರು ಕಂಗಾಲಾಗಿದ್ದರು....
ಬೆಳ್ತಂಗಡಿ:ಕೊಯ್ಯೂರು ಮಲೆಬೆಟ್ಟು ನಿವಾಸಿ ರಝೀನ (24) ನಾಪತ್ತೆಯಾಗಿದ್ದಾರೆ. ಬಿ.ಸಿ.ರೋಡಿನ ಕಾರಿಂಜದ ಮಹಮ್ಮದ್ ಸಲೀಂ ಎಂಬುವವರ ಪತ್ನಿಯಾಗಿರುವ ರಝೀನ್ ಅವರ ಎರಡು ವರ್ಷದ ಮಗ 40 ದಿನಗಳ ಹಿಂದೆ ಸಾವಿಗೀಡಾಗಿತ್ತು. ನಂತರ ಕೆಯ್ಯೂರಿನ ತಾಯಿ ಮನೆಯಲ್ಲಿದ್ದ ರಝೀನ...
ಮುಂಬೈ: ಮಾನವೀಯತೆ ಎಲ್ಲಿದೆ? ಇನ್ನೆಂಥಾ ಕ್ರೂರಿ ಇರಬೇಕು ಆತ. ತನ್ನನ್ನು ಸಾಕಿ ಬೆಳೆಸಿದ್ದ ಅಜ್ಜಿಗೆ ಕ್ಯಾನ್ಸರ್ಬಂದಿದೆ ಎಂದು ಮರುಗುವ ಬದಲು ಮೊಮ್ಮಗನೊಬ್ಬ ಕಸದ ತೊಟ್ಟಿಯಲ್ಲಿ ಎಸೆದು ಹೋಗಿರುವ ಹೃದಯ ವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. 60...
ಉಡುಪಿ: ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಇಂಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿ ಆಗಿ ಕೆಲಸ ನಿರ್ವಹಣೆ ಮಾಡಿದ್ದಾರೆ....
ಕಾಗವಾಡ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದ ಹಣ ಬಿಡುಗಡೆಯಾಗದ ಕಾರಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(NWKRTC)...
ಹೆಚ್ಚಾಗಿ ಪುತ್ತೂರಿನವರೇ ಸೇರಿ ಮಾಡಿರುವ ಚಿತ್ರವೊಂದು,ಜು 4 ರಂದು “ಜಂಗಲ್-ಮಂಗಲ್ “ಸಿನಿಮಾ. ಭರ್ಜರಿ ತೆರೆಗೆ ಬರಲಿದೆ. ಚಿತ್ರರಂಗದಲ್ಲಿ ನಿಧಾನವಾಗಿ ಸದ್ದು ಮಾಡುತ್ತಿದೆ. ‘ಜಂಗಲ್ ಮಂಗಲ್’ ಎಂಬ ವಿಶಿಷ್ಠ ಶೀರ್ಷಿಕೆ ಹೊಂದಿರುವ ಚಿತ್ರ. ಕೆ.ಜಿ.ಫ್ ಮುಂತಾದ ಚಿತ್ರಗಳಲ್ಲಿ...
ಕರ್ನಾಟಕದಾದ್ಯಂತ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾಗಿ 15 ದಿನಗಳು ಕಳೆದಿದ್ದರೂ ಕರಾವಳಿ ಹಾಗೂ ಮಲೆನಾಡಿನ ಕೆಲವು ಕಡೆ ಬಿಟ್ಟರೆ ಬೇರೆಲ್ಲೂ ಅಷ್ಟೊಂದು ಮಳೆಯಾಗಿರಲಿಲ್ಲ. ಈಗ ಜೂನ್ 23ರಿಂದಲೇ...
ಮಂಗಳೂರು: ಗಾಯಕ ರಾಜೇಶ್ ಗೆ ವಂಚನೆ ಮಾಡಿರುವ ಆರೋಪದಲ್ಲಿ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜೇಶ್, ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ನ ಮಾಲಾಡಿ ನಿವಾಸಿ. ವೃತ್ತಿಯಲ್ಲಿ ಗಾಯಕರಾಗಿದ್ದಾರೆ. ಇವರು Arvind vivek ಎಂಬ ಹೆಸರಿನಲ್ಲಿ ಫೇಸ್ಬುಕ್ ಪೇಜ್ನಲ್ಲಿ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. 2024 ರಲ್ಲಿ ಫೇಸ್ಬುಕ್ ಮೂಲಕ ಸಂಧ್ಯಾ ಪವಿತ್ರ ನಾಗರಾಜ್ ಪರಿಚಯವಾಗಿದೆ. ಈ ವೇಳೆ ಹೋರಾಟಗಾರ್ತಿ ಎಂದು ನಂಬಿಸಿದ್ದ ಸಂಧ್ಯಾ, ನೊಂದವರಿಗೆ, ವಂಚನೆಗೊಳಪಟ್ಟವರಿಗೆ ಸಹಾಯ ಮಾಡುತ್ತಿರುವುದಾಗಿ ತಿಳಿಸಿದ್ದರು. ರಾಜ್ಯದಲ್ಲಿ ಅಮಾಯಕರ ಮೇಲೆ ದಾಖಲಾಗಿದ್ದ ಅನೇಕ ಪ್ರಕರಣ ಬಗೆಹರಿಸಿಕೊಟ್ಟಿರುವುದಾಗಿ ಸಂಧ್ಯಾ ಹೇಳಿಕೊಂಡಿದ್ದರು. ಈ ವೇಳೆ ಬಂಟ್ವಾಳ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ರಾಜೇಶ್ ತಿಳಿಸಿದ್ದರು. ಈ ಪ್ರಕರಣವನ್ನು ಹೈಕೋರ್ಟ್ನಲ್ಲಿ ಬಗೆಹರಿಸುವುದಾಗಿ ಆಕೆ ನಂಬಿಸಿದ್ದರು. ಈ ಬಗ್ಗೆ ದಾಖಲಾತಿ ಪಡೆಯಲು 2025ರ ಜನವರಿಯಲ್ಲಿ ಬೆಂಗಳೂರಿನ ಜೆ.ಪಿನಗರದ ಮನೆಗೆ ಸಂಧ್ಯಾ ಕರೆಸಿದ್ದರು. ಬಳಿಕ ಪ್ರಕರಣ ಬಗೆಹರಿಸಲು ಸ್ವಲ್ಪ ಖರ್ಚು ಇದೆ ಎಂದಿದ್ದರು. ದೂರುದಾರ ರಾಜೇಶ್ರಿಂದ ಹಂತ ಹಂತವಾಗಿ 3.20 ಲಕ್ಷ ರೂ. ಹಣವನ್ನು ಪಡೆದಿದ್ದರು. ಬಳಿಕವೂ ಸಮಸ್ಯೆ ಬಗೆಹರಿಯದ ಕಾರಣ ಈ ಬಗ್ಗೆ ರಾಜೇಶ್ ಪ್ರಶ್ನಿಸಿದ್ದರು. ಆಗ ಸಂಧ್ಯಾ ಇನ್ನೂ ಹೆಚ್ಚಿನ ಹಣಕ್ಕೆ ಬೇಡಿಕೆಯನ್ನು ಇಟ್ಟಿದ್ದರು. ಸಂಶಯಗೊಂಡು ವಿಚಾರಿಸಿದಾಗ ವಂಚನೆ ಆಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ರಾಜೇಶ್ ತಿಳಿಸಿದ್ದಾರೆ. ದೂರಿನ ಹಿನ್ನೆಲೆ BNS ಕಾಯ್ದೆಯಡಿ 318(4), 351(2) ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ.