ಬೆಂಗಳೂರು, ಜನವರಿ 04: ಟ್ಯಾಕ್ಸ್ ವಂಚನೆ ಆರೋಪದ ಹಿನ್ನೆಲೆ ನಗರದಲ್ಲಿ ಐದೂವರೆ ಕೋಟಿ ರೂ. ಮೌಲ್ಯದ ಬೆಂಟ್ಲಿ ಕಾರನ್ನು ಕೋರಮಂಗಲದಲ್ಲಿ ಆರ್ಟಿಒ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಕಾರು ನೋಂದಣಿ ವೇಳೆ 5 ಕೋಟಿ 50 ಲಕ್ಷ...
ಪುತ್ತೂರು.04: ಪಡುಮಲೆ ಬಿಟ್ಟ ಕೋಟಿ ಚೆನ್ನಯರು ಇಲ್ಲಿ ಬಂದು ಕುಳಿತ ಕಾರಣದಿಂದಲೇ ಏನೋ ಇಲ್ಲಿ ವರ್ಷದ ಪ್ರಥಮ ಬೈದೇರುಗಳ ನೇಮೋತ್ಸವ ನಡೆಯುತ್ತಿದೆ. ಬಹಳ ವರ್ಷಗಳ ಹಿಂದೆ ಬೈದೇರುಗಳಿಗೆ ಕೇವಲ ತಂಬಿಲ ಸೇವೆ ನಡೆಯುತ್ತಿತ್ತು. ಬೈದೇರುಗಳಿಗೆ ನೇಮೋತ್ಸವ...
ಪುತ್ತೂರು: ನಾವು ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ನಮ್ಮ ರಸ್ತೆಯನ್ನು ಇದುವರೆಗೂ ಯಾರೂ ಅಭಿವೃದ್ದಿ ಮಾಡಿಲ್ಲ, ನೀವು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸ ಮಾಡುತ್ತಿದ್ದೀರಿ, ಪಕ್ಷ ಬೇಧವಿಲ್ಲದೆ ಅನುದಾನವನ್ನು ನೀಡುತ್ತಿದ್ದೀರಿ, ನಮ್ಮ ಬೇಡಿಕೆಯನ್ನು ಈಡೇರಿಸಿದ್ದಲ್ಲಿ ನಾವು ನಿಮ್ಮ ಪರ ಬಹಿರಂಗ ಪ್ರಚಾರ ಮಾಡಿಯೇ ಮಾಡುತ್ತೇವೆ ಎಂದು ಪೆರುವಾಯಿ ಗ್ರಾಮದ ಬಿಜೆಪಿ ಕಾರ್ಯಕರ್ತರ ನಿಯೋಗವಚೊಂದು ಪುತ್ತೂರು ಶಾಸಕ ಅಶೋಕ್ ರೈ ನಿವಾಸಕ್ಕೆ ಬಂದು ಭರವಸೆಯ ಜೊತೆಗೆ ಶಪಥ ಮಾಡಿದ್ದಾರೆ. ಪೆರುವಾಯಿ ಗ್ರಾಮದ ಬದಿಮಾರ್ ಪ್ರದೇಶದಲ್ಲಿ ಅನೇಕ ಮನೆಗಳಿದೆ. ನಮ್ಮ ರಸ್ತೆ ಇನ್ನೂ ಅಭಿವೃದ್ದಿಯಾಗಿಲ್ಲ. ರಸ್ತೆಯಾಗಬೇಕಾದರೆ ಖಾಸಗಿ ವ್ಯಕ್ತಿಗಳು ಜಾಗ ಬಿಟ್ಟುಕೊಡಬೇಕಾಗುತ್ತದೆ. ಇಷ್ಟು ವರ್ಷದಲ್ಲಿ ನಾವು ಮಾಡಿದ ಪ್ರಯತ್ನವೆಲ್ಲವೂ ವಿಫಲವಾಗಿದೆ. ರಾಜಕೀಯ ನೇತಾರರು ಈ ಹಿಂದೆ ಭರವಸೆಯನ್ನು ಮಾತ್ರ ಕೊಟ್ಟಿದ್ದಾರೆ ವಿನಾ ನಮ್ಮ ಸಮಸ್ಯೆ ಪರಿಹಾರ ಮಾಡಿಲ್ಲ. ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸಿ ನಮ್ಮ ಪ್ರದೇಶಕ್ಕೆ ರಸ್ತೆಯನ್ನು ನಿರ್ಮಾಣ ಮಾಡಿ ಕೊಡುತ್ತೀರಿ ಎಂಬ ಪೂರ್ಣ ನಂಬಿಕೆ ನಮ್ಮಲ್ಲಿದೆ. ನಮ್ಮ ಬೇಡಿಕೆಯನ್ನು ನೀವು ಈಡೇರಿದ್ದಲ್ಲಿ ನಾವು ಬಹಿರಂಗವಾಗಿ ನಿಮ್ಮ ಪರ ಪ್ರಚಾರ ಮಾಡುತ್ತೇವೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಶಾಸಕರ ಮುಂದೆ ಶಪಥ ಮಾಡಿದ್ದಾರೆ. ಈ ವೇಳೆ ವಸಂತಶೆಟ್ಟಿ ಬದಿಯಾರು, ಜಯರಾಮ ಬಿ, ಪದ್ಮಶ್ರೀ, ಜಯರಾಮ ವಿಠಲ, ಮತ್ತು ಗೀತಾ ಉಪಸ್ಥಿತರಿದ್ದರು. ನಮ್ಮ ಜೊತೆ ಇನ್ನೂ ಅನೇಕ ಮಂದಿ ಇದ್ದು ಅವರೆಲ್ಲರನ್ನೂ ನಾವು ಸೇರಿಸಿಕೊಳ್ಳಲಿದ್ದೇವೆ ಎಂದು ಹೇಳಿದರು. ಈ ವೇಳೆ ಮಾತನಾಡಿದ ಶಾಸಕರು ಖಾಸಗಿ ವ್ಯಕ್ತಿಗಳ ಜೊತೆ ಮಾತುಕತೆ ನಡೆಸುವ ಪ್ರಯತ್ನವನ್ನು ಮಾಡುತ್ತೇನೆ. ಅವರ ಮನವೊಲಿಸಿ ರಸ್ತೆ ನಿರ್ಮಾಣದ ಭರವಸೆಯನ್ನು ನೀಡಿದರು.
ಪುತ್ತೂರು, ಜನವರಿ 3:ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ (Additional SP) ಶ್ರೀ ಅನಿಲ್ ಕುಮಾರ್ ಭೂಮರೆಡ್ಡಿ ಅವರು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದರ ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಬಂಟ್ವಾಳ ಕ್ಷೇತ್ರದ ಪೆರ್ಲಾಪಿನ ಉದ್ಯಮಿ ಶ್ರೀ ಹನೀಫ್ ಪೆರ್ಲಾಪು ಇವರನ್ನು ಕೆಪಿಸಿಸಿ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಶ್ರೀ ಪುಟ್ಟಸ್ವಾಮಿ ಗೌಡ ಅವರು...
ಕಾಣಿಯೂರು:ಇದೇ ಬರುವ ದಿನಾಂಕ 05-01-2026ನೇ ಸೋಮವಾರ ಕಾಣಿಯೂರು (ಪ್ರಶಾಂತ್ ಬಾಹತ್ತಿರ) ‘ಕೆ.ಪಿ ಕಾಂಪ್ಲೆಕ್ಸ್’ನಲ್ಲಿ ನೂತನವಾಗಿ ಪ್ರಾರಂಭಗೊಳ್ಳಲಿರುವ ನಕ್ಷತ್ರ ಟ್ರೇಡರ್ಸ್ಶು ಭಾರಂಭಗೊಳ್ಳಲಿರುವುದು. 9740709180 ಇಲ್ಲಿ ಅಡಿಕೆ, ಕರಿಮೆಣಸು, ಗೇರುಬೀಜ ಹಾಗೂ ಇತರ ಕಾಡು ಉತ್ಪತ್ತಿ ಖರೀದಿಸಲಾಗುವುದು.
ಮುಂಡೂರು.ಜ04: ಜನವರಿ ಒಂದರೊಂದು ನಡೆದ ಒತ್ತಕೊಲದ ಪ್ರಯುಕ್ತ ರಸ್ತೆ ಬದಿಯಲ್ಲಿ ಕಸ ಕಡ್ಡಿಗಳು ಮತ್ತು ಪ್ಲಾಸ್ಟಿಕ್ ಚೀಲಗಳು ಕಂಡುಬಂದ ಹಿನ್ನೆಲೆಯಲ್ಲಿ ಮತ್ತು ಜನವರಿ 14ರಂದು ವಾರ್ಷಿಕೋತ್ಸವ ನಡೆಯುವ ಪ್ರಯುಕ್ತ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಉದಯಗಿರಿ...
ಮಂಗಳೂರು: ಬಂದರು ನಗರಿ ಮಂಗಳೂರಿನ ಪ್ರಸಿದ್ಧ ಗರೋಡಿ ಕ್ಷೇತ್ರದ ಜಾತ್ರೋತ್ಸವ ಸಂದರ್ಭದಲ್ಲಿ ‘ಕೋಳಿ ಅಂಕ’ ನಡೆಸುವ ವಿಚಾರವಾಗಿ ಪರ–ವಿರೋಧ ಚರ್ಚೆಗಳು ತೀವ್ರಗೊಂಡಿವೆ. ಕೆಲವರು ಇದನ್ನು ಉತ್ಸವದ ಸಂದರ್ಭದ ಮನರಂಜನಾ ಆಟವೆಂದು ಪರಿಗಣಿಸುತ್ತಿದ್ದರೆ, ಇನ್ನು ಕೆಲವರು ಇದನ್ನು...
ಪುತ್ತೂರು: ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆಗೆ ಇನ್ನೂ ಅಧಿಕೃತ ಆದೇಶ ಬಂದಿಲ್ಲ, ಆದರೂ ಕೆಲವು ಕಡೆಗಳಲ್ಲಿ ಬಿಎಲ್ಒಗಳು ಮತದಾರ ಪಟ್ಟಿ ಮ್ಯಾಪಿಂಗ್ ಮಾಡುತ್ತಿದ್ದಾರೆ. ಬಹುತೇಕ ಗ್ರಾಮಗಳಲ್ಲಿ ಈ ಪ್ರಕ್ರಿಯೆ ನಡೆಯುತ್ತಿದೆ. ಮ್ಯಾಪಿಂಗ್ ಬಳಿಕ ನಿಮ್ಮ ನಿಮ್ಮ ವೋಟರ್ ಪಟ್ಟಿಯನ್ನು ಪರಿಶೀಲಿಸಿ ನಿಮ್ಮ ಹೆಸರು ಇದೆಯೇ ಎಂದು ಖಾತ್ರಿಪಡಿಸಿ ಇಲ್ಲದಿದ್ದರೆ ನೀವು ಮತದಾನದಿಂದ ವಂಚತರಾಗುವ ಸಾಧ್ಯತೆ ಇದೆ ಈಗಾಗಲೇ ಬಿಹಾರದಲ್ಲಿ ೫೦ ಲಕ್ಷ ವೋಟು ಡಿಲಿಟ್ ಮಾಡಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಅವರು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಾರೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಮತದಾರ ಪಟ್ಟಿ ಪರಿಷ್ಕರಣೆಯ ಕುರಿತು ಬಿಎಲ್ಎಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮ್ಯಾಪಿಂಗ್ ಬಗ್ಗೆ ಈಗಾಗಲೇ ಕೆಲವೊಂದು ಆಕ್ಷೇಪಾರ್ಹ ದೂರುಗಳು ಬಂದಿದೆ. ವಿದೇಶದಲ್ಲಿರುವ ಅಥವಾ ಕ್ಷೇತ್ರ ಬಿಟ್ಟು ಹೊರಗಡೆ ನೆಲೆಸಿರುವ ಕುಟುಂಬಗಳ ವೋಟು ಡಿಲಿಟ್ ಮಾಡುವ ಸಾಧ್ಯತೆ ಇದೆ. ಕಾರ್ಯಕರ್ತರು, ಬಿಎಲ್ಎಗಳು ಈಬಗ್ಗೆ ಅಧಿಕಾರಿಗಳಿಗೆ ಸೂಕ್ತ ದಾಖಲೆ, ಮಾಹಿತಿ ನೀಡುವ ಮೂಲಕ ಮತದಾರ ಪಟ್ಟಿಯಿಂದ ಹೆಸರು ಅಳಿಸದಂತೆ ನೋಡಿಕೊಳ್ಳಬೇಕು. ನನ್ನದು ಸರಿ ಇದೆ ಎಂದು ಕೈಕಟ್ಟಿ ಕೂರಬೇಡಿ. ನಾಡಿದ್ದು ವೋಟು ಹಾಕ್ಲಿಕ್ಕೆ ಹೋಗುವಾಗ ಮತದಾರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಆ ವೇಳೆ ಏನೂ ಮಾಡಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು. ಕರ್ನಾಟಕದಲ್ಲಿ ಎಸ್ಐಆರ್ ಗೆ ಅಧಿಕೃತ ಆದೇಶ ಬಂದ ಬಳಿಕ ಆನ್ಲೈನ್ ಮೂಲಕವೂ ನಿಮ್ಮ ಹೆಸರು ಮತದಾರ ಪಟ್ಟಿಯಲ್ಲಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬಹುದು ಎಂದು ಶಾಸಕರು ಹೇಳಿದರು. ಮತದಾರ ಪಟ್ಟಿಯಿಂದ ಹೆಸರು ಅಳಿಸುವ ಅಧಿಕಾರ ಯಾರಿಗೂ ಇಲ್ಲ ಎಂಬುದನ್ನೂ ಶಾಸಕರು ವಿವರಿಸಿದರು. ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಅಧ್ಯಕ್ಷತೆ ವಹಿಸಿದ್ದರು.
ಪುತ್ತೂರು: ಕರ್ನಾಟಕದಲ್ಲಿ ಎಸ್ಐಆರ್ ಗೆ ಇನ್ನೂ ಅಧಿಕೃತ ಆದೇಶವಾಗಿಲ್ಲ ಆದರೂ ಕೆಲವು ಕಡೆಗಳಲ್ಲಿ ಬಿಎಲ್ಒಗಳಿಗೆ ಮತದಾರ ಪಟ್ಟಿ ಪರಿಷ್ಕರಣೆ ( ಮ್ಯಾಪಿಂಗ್) ನಡೆಸು ಆದೇಶ ನೀಡಿದ್ದೀರಿ, ಯಾವ ಆಧಾರದಲ್ಲಿ ಈ ಮ್ಯಾಪಿಂಗ್ ಪ್ರಕ್ರಿಯೆ ನನಡೆಸುತ್ತಿದ್ದೀರಿ, ನಿಮ್ಮ...