ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಕಾಟುಕುಕ್ಕೆ ಕ್ಷೇತ್ರದಲ್ಲಿ ಪುತ್ತೂರು ಶಾಸಕ ಆಶೋಕ್ ಕುಮಾರ್ ರೈಗೆ ಅಭಿಮಾನಿಗಳಿಂದ ಪೌರ ಸನ್ಮಾನ

Published

on

ಪೆರ್ಲ: ಚೌ ಗ್ರಾಮದ ದೇವಸ್ಥಾನ ಎಂದೇ ಇತಿಹಾಸ ಪ್ರಸಿದ್ಧವಾದ ಕಾಟುಕುಕ್ಕೆ ಶ್ರೀಸುಬ್ರಾಯ ಕ್ಷೇತ್ರಕ್ಕೆ ಪುತ್ತೂರು ಶಾಸಕ ಆಶೋಕ್ ಕುಮಾರ್ ರೈ ಭೇಟಿ ನೀಡಿದರು.

 

ವಿಧಾನ ಸಭಾ ಚುನಾವಣಾ ಸಂದರ್ಭ ಇವರ ಗೆಲುವಿಗಾಗಿ ಅಭಿಮಾನಿಗಳು ಪ್ರಾರ್ಥಿಸಿದ್ದ ಹರಕೆ ತೀರಿಸಲು ಕಾಟುಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ್ದರು. ಈ ಸಂದರ್ಭ ಕಾಟುಕುಕ್ಕೆಯ ಅಭಿಮಾನಿ ಬಳಗದ ಪರವಾಗಿ ಪೌರ ಸನ್ಮಾನ ನಡೆಸಲಾಯಿತು. ಕ್ಷೇತ್ರದ ಆಡಳಿತ ಮೊಕ್ತೇಸರ ತಾರನಾಥ ರೈ ಪಡ್ಡಂಬೈಲು, ಮಾಜಿ ಆಡಳಿತ ಮೊಕ್ತೇಸರ ನಾರಾಯಣ, ಉತ್ಸವ ಆಚರಣಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಭಟ್ ಮಿತ್ತೂರು ಉಪಸ್ಥಿತರಿದ್ದರು. ಎಣ್ಮಕಜೆ ಗ್ರಾಮ ಪಂಚಾಯತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್.ಗಾಂಭೀರ್ ಸ್ವಾಗತಿಸಿ ದೀಪಕ್ ಭಂಡಾರದ ಮನೆ ವಂದಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಅಭಿವೃದ್ಧಿ ಕಾರ್ಯಕ್ಕೆ ಕರ್ನಾಟಕ ಸರಕಾರದಿಂದ ಪೂರಕ ಯೋಜನೆಗಳನ್ನು ನೀಡಬೇಕೆಂದು ಆಗ್ರಹಿಸಿ ಕ್ಷೇತ್ರದ ಆಡಳಿತ ಮೊಕ್ತೇಸರ ತಾರನಾಥ ರೈ ಪಡ್ಡಂಬೈಲು ಹಾಗೂ ಅಡ್ಕಸ್ಥಳ -ಕಾಟುಕುಕ್ಕೆ ಮೂಲಕ ಆರ್ಲಪದವು ಪುತ್ತೂರಿಗೆ ಸರಕಾರಿ ಬಸ್ ಮಂಜೂರುಗೊಳಿಸಬೇಕೆಂದು ಆಗ್ರಹಿಸಿ ನಾಗರಿಕ ಪರವಾಗಿ ಬಿ.ಎಸ್.ಗಾಂಭೀರ್ ಶಾಸಕರಿಗೆ ಮನವಿ ಸಲ್ಲಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement