ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಸ್ಕೂಟರ್ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಮೃತ್ಯು

Published

on

ಕಡಬ; ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಮಹಿಳೆ ಮೃತಪಟ್ಟಿದ್ದಾರೆ. ಈ ಘಟನೆ ಕಡಬ  ತಾಲೂಕಿನ ಸಮೀಪದ ಮರ್ದಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ನಡೆದಿದೆ. ಮರ್ಧಾಳ ನಿವಾಸಿ  ಅವ್ವಮ್ಮ   ಮೃತ ಮಹಿಳೆ.

ಭಾನುವಾರ  ರಾತ್ರಿ ಅವ್ವಮ್ಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದ ಸ್ಕೂಟರ್  ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಮಹಿಳೆಯನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement