ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಬೆಳ್ಳಾರೆ: ವಿಷಕಾರಿ ಹಣ್ಣಿನ ಜ್ಯೂಸ್ ಸೇವಿಸಿದ ತಂದೆ-ಮಗಳು, ಮಗಳು ಮೃತ್ಯು

Published

on

 

ಬೆಳ್ಳಾರೆ : ಕಾಡಿನಲ್ಲಿ ಸಿಗುವ ಐರೋಳ್ ಹಣ್ಣನ್ನು ಸೇವಿಸಬಹುದಾದ ವಸ್ತು ಎಂದು ಭಾವಿಸಿ ಮನೆಗೆ ತಂದು ಶರಬತ್ತು ಮಾಡಿ ಕುಡಿದ ತಂದೆ ಹಾಗೂ ಮಗಳಲ್ಲಿ ಮಗಳು ಮೃತಪಟ್ಟ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಅಮರಪಡ್ನೂರು ಗ್ರಾಮದ ಶೇಣಿ ಎಂಬಲ್ಲಿಂದ ವರದಿಯಾಗಿದೆ.

 

ಅಮರಪಡ್ನೂರು ಗ್ರಾಮದ ಶೇಣಿ ಸಮೀಪದ ಕುಳ್ಳಾಜೆ ನಿವಾಸಿ ಲೀಲಾವತಿ (35ವ.) ಮೃತಪಟ್ಟವರು.

 

ಅಮರಪಡ್ನೂರು ಗ್ರಾಮದ ಕುಳ್ಳಾಜೆ ಎಂಬಲ್ಲಿ ಲೀಲಾವತಿ ಹಾಗೂ ಅವರ ತಂದೆ ಒಂದು ವಾರದ ಹಿಂದೆ ಮೈರೋಳ್ ಹಣ್ಣಿನ ರಸ ತೆಗೆದು ಶರಬತ್ತು ಮಾಡಿ ಕುಡಿದಿದ್ದರು.

ಪರಿಣಾಮವಾಗಿ ಲೀಲಾವತಿ ಅವರಿಗೆ ವಾಂತಿ, ಭೇದಿ ಆರಂಭವಾಗಿ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗುವಾಗ ಅವರು ಮೃತಪಟ್ಟರು.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version