ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಬೆಂಗಳೂರು:ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ

Published

on

ಬೆಂಗಳೂರು: ಬಿಪಿಎಲ್ ಕಾರ್ಡ್‍ನಲ್ಲಿ ಫಲಾನುಭವಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದ್ದು, ಅದನ್ನು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 7 ಗಂಟೆಯ ವರೆಗೆ ಸರಿಪಡಿಸಿಕೊಳ್ಳಬಹುದಾಗಿದೆ. ಅದನ್ನು ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ನಿಗಧಿತ ದಿನಾಂಕವನ್ನು ನೀಡಲಾಗಿದೆ.

ಅ.5ರಿಂದ 7ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಅವಕಾಶ ನೀಡಲಾಗಿದೆ. ಇನ್ನು 2ನೆ ಹಂತದಲ್ಲಿ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಮಂಡ್ಯ, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಸೇರಿ ಒಟ್ಟು 15 ಜಿಲ್ಲೆಗಳಿಗೆ ಅ.8ರಿಂದ ಅ.10ರ ವರೆಗೆ ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕೊಡಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version