ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಮಂಗಳೂರು:ವಿವಾಹ ಭರವಸೆ ನೀಡಿ ಯುವತಿಗೆ ವಂಚನೆ ಆರೋಪ – ಬಿಗ್ ಬಾಸ್ ಸ್ಪರ್ಧಿ ಶಿಯಾಝ್ ಕರೀಂ ಅರೆಸ್ಟ್

Published

on

ಮಂಗಳೂರು: ವಿವಾಹ ಭರವಸೆ ನೀಡಿ ಯುವತಿಯೋರ್ವಳಿಗೆ ಕಿರುಕುಳ ನೀಡಿದ ಆರೋಪದ ದೂರಿನಂತೆ ಬಿಗ್ ಬಾಸ್ ನಟ ಶಿಯಾಝ್ ಕರೀಂ (34)ನನ್ನು ಕಾಸರಗೋಡು ಚಂದೇರ ಠಾಣಾ ಪೊಲೀಸರು ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

 ಶಿಯಾಝ್ ವಿರುದ್ಧ ಪೊಲೀಸರು ಲುಕ್ ಔಟ್ ನೋಟಿಸ್ ಬಿಡುಗಡೆ ಗೊಳಿಸಿದ್ದರು. ಕಾಸರಗೋಡು ಪಡನ್ನ ದ 32ರ ಹರೆಯದ ಯುವತಿ ನೀಡಿದ ದೂರಿನಂತೆ ಚಂದೇರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಶಿಯಾಝ್ ಬಿಗ್ ಬಾಸ್ ರಿಯಾಲಿಟಿ ಶೋ ಗಳಲ್ಲಿ ಪಾಲ್ಗೊಂಡಿದ್ದರು. ಎರ್ನಾಕುಲಂ ನ ಜಿಮ್ ವೊಂದರಲ್ಲಿ ಕೆಲಸಕ್ಕಿದ್ದ ದೂರುದಾತೆಗೆ ವಿವಾಹವಾಗುವ ಭರವಸೆ ನೀಡಿ ಹಲವು ಕಡೆಗಳಿಗೆ ಕರೆದೊಯ್ದು ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಹೇಳಲಾಗಿದೆ. ಇದಲ್ಲದೇ ಶಿಯಾಝ್ ಸುಮಾರು 11 ಲಕ್ಷ ರೂ. ಪಡೆದು ವಂಚಿಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. 2021 ರಿಂದ 2023 ರ ತನಕ ಮೂರು ವರ್ಷಗಳಲ್ಲಿ ಎರ್ನಾಕುಲಂ, ಮುನ್ನಾರ್ ರೆಸಾರ್ಟ್ ಹಾಗೂ ಇನ್ನಿತರ ಕಡೆಗಳಿಗೆ ಕರೆದೊಯ್ದು ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ನಡುವೆ ಬೇರೆ ಯುವತಿಯ ಜೊತೆ ವಿವಾಹ ನಿಶ್ಚಯ ಕುರಿತು ಶಿಯಾಝ್ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದು, ವಿವಾಹ ಭರವಸೆ ನೀಡಿ ತನ್ನನ್ನು ವಂಚಿಸಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version