ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಸವಣೂರು , ಉಪ್ಪಿನಂಗಡಿ ಗ್ರಾ.ಪಂ.ಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ

Published

on

ಸವಣೂರು: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್‌, ಕಾರಂತ ಟ್ರಸ್ಟ್‌, ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಕಾರಂತೋತ್ಸವ, ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಡಬ ತಾಲೂಕಿನ ಸವಣೂರು ಹಾಗೂ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಗ್ರಾ.ಪಂ.ಗೆ ಡಾ.ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ನಡೆಯಲಿದೆ.

ಕೋಟತಟ್ಟುವಿನ ಡಾ. ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ಕಾರಂತೋತ್ಸವ ನಡೆಯಲಿದ್ದು, ಈ ಸಂದರ್ಭದಲ್ಲಿ ಈ ಬಾರಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗಾಂಧಿ ಗ್ರಾಮ ಪ್ರಶಸ್ತಿ ಸ್ವೀಕರಿಸಿದ 9 ಗ್ರಾಮ ಪಂಚಾಯತುಗಳಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿಯನ್ನು ಕರ್ನಾಟಕದ ರಾಜ್ಯಪಾಲರಾದ ಧಾವರ್‌ಚಂದ್ ಗೆಹ್ಲೋತ್ ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version