ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ನ. 26ರಂದು ಉಪ್ಪಿನಂಗಡಿಯಲ್ಲಿ ಲೋಕಕಲ್ಯಾಣಕ್ಕಾಗಿ ಪುತ್ತಿಲ ಪರಿವಾರದಿಂದ ಸತ್ಯನಾರಾಯಣ ಪೂಜೆ, ಬೃಹತ್ ಹಿಂದೂ ಸಮಾವೇಶ

Published

on

 

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಉಪ್ಪಿನಂಗಡಿ ಇದರ ವತಿಯಿಂದ ಲೋಕಕಲ್ಯಾಣಕ್ಕಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಬೃಹತ್ ಹಿಂದೂ ಸಮಾವೇಶ ನ.26ರಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

ಮಧ್ಯಾಹ್ನ 2ರಿಂದ ಭಜನಾ ಕಾರ್ಯಕ್ರಮ, ಸಂಜೆ 4ರಿಂದ ಸತ್ಯನಾರಾಯಣ ಪೂಜೆ, 6:30 ರಿಂದ ಬೃಹತ್ ಹಿಂದೂ ಸಮಾವೇಶ ನಡೆಯಲಿದ್ದು ರಾತ್ರಿ 8ರಿಂದ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಮತ್ತು ರಂಗಯ್ಯ ಬಲ್ಲಾಳ್ ಕೆದಂಬಾಡಿ ಬೀಡು ಇವರ ನೇತೃತ್ವದಲ್ಲಿ ಸುಸ್ವರ ಮೆಲೋಡಿಸ್ ಉಪ್ಪಿನಂಗಡಿ ಇವರಿಂದ ಭಕ್ತಿ ಭಾವ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಗಣ್ಯಾತಿ ಗಣ್ಯರು,ಸ್ವಾಮೀಜಿಗಳು, ಭಾಗವಹಿಸಲಿದ್ದಾರೆ ಎಂದು ಪುತ್ತಿಲ ಪರಿವಾರದ ಪ್ರಮುಖರು ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement