ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈPublished
2 years agoon
By
Akkare News
RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ಒಡೆತನದ ಶಾಲೆಯಲ್ಲಿ ಶನಿವಾರ ನಡೆದ ಸಮಾರಂಭವೊಂದರಲ್ಲಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಪಾಲ್ಗೊಂಡಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಕುಮಾರಸ್ವಾಮಿ ಭಾಗವಹಿಸಿದ್ದರು.

ತಾನು ಇಲ್ಲಿಗೆ ಬಾರದಿದ್ದರೆ ತುಂಬಾ ನಷ್ಟವಾಗುತ್ತಿತ್ತು. ಬಾಲ್ಯದಲ್ಲಿ ತಾನು ಶ್ರೀರಾಮನ ಭಜನೆ ಮಾಡುತ್ತಿದ್ದೆ. ಭಾಂಧವ್ಯದ ಕೊರತೆ ಕಾಣುತ್ತಿರುವ ಈ ಸಂದರ್ಭದಲ್ಲಿ ಸೌಹಾರ್ಧದಿನಗಳನ್ನು ಕಾಣಲು ಸಂಸ್ಕೃತಿಯ ಬದುಕನ್ನು ಶಿಕ್ಷಣದ ಮೂಲಕ ನೀಡುತ್ತಿರುವ, ಈ ಮೂಲಕ ಸರಕಾರದ ಕಣ್ತೆರೆಸುವ ಶಿಕ್ಷಣ ಸಂಸ್ಥೆ ಡಾ.ಭಟ್ ಅವರದ್ದು, ಎಂದು ಹೇಳಿ ಜೈಶ್ರೀರಾಮ್ ಎಂದು ಎಚ್ಡಿಕೆ ಹೇಳಿದರು.
ಅಸೆಂಬ್ಲಿ ಚುನಾವಣೆಯ ಸೋಲಿನ ನಂತರ ಜೆಡಿಎಸ್ ಮುಖಂಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಜಾತ್ಯತೀಯ ಸಿದ್ಧಾಂತ ಬಿಟ್ಟಿದ್ದಾರಾ? ಎಂಬ ಪ್ರಶ್ನೆಯೊಂದನ್ನು ಎದ್ದು ಕಾಣುತ್ತಿದೆ. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವಕ್ಕೆ ವಿಶೇಷ ಅತಿಥಿಯಾಗಿ ಎಚ್.ಡಿ.ಕುಮಾರಸ್ವಾಮಿ ಭಾಗಿಯಾಗಿರುವುದು ನಿಜಕ್ಕೂ ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ. ಈ ಮೊದಲು ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಮಾತನಾಡಿದ್ದ ಕುಮಾರಸ್ವಾಮಿ ಅವರು ಇದೀಗ ಅವರ ಶಾಲೆಗೇ ಭೇಟಿ ನೀಡಿದ್ದು ಚರ್ಚೆಗೆ ಗ್ರಾಸವಾಗಿರುವ ವಿಷಯ.
