ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಅರ್ಜುನ ಸಮಾಧಿ ಸ್ಥಳಕ್ಕೆ ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ

Published

on

ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಸಕಲೇಶಪುರ ತಾಲ್ಲೂಕಿನ ಯಸಳೂರು ದಬ್ಬಳಿ ಕಟ್ಟೆ ನೆಡುತೋಪುನಲ್ಲಿ ಆನೆ ಅರ್ಜುನ ಸಮಾಧಿ ಸ್ಥಳಕ್ಕೆ ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

ಸಕಲೇಶಪುರ: ದ 11,ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತ ಅರ್ಜುನ ಮೃತಪಟ್ಟಿರು ವುದು ಅತ್ಯಂತ ದುಃಖದ ಸಂಗತಿ. ಕಾರ್ಯಾಚರಣೆ ವೇಳೆ ಕಾಡಾನೆ ಹಿಮ್ಮೆಟ್ಟಿಸಲು ಅರ್ಜುನ ಹೊರಾಡಿ ತಾನು ಮೃತಪಟ್ಟು ಉಳಿದವರ ಜೀವ ಉಳಿಸಿದ್ದಾನೆ. ನ.24 ರಿಂದ ಆನೆ ಹಿಮ್ಮೆಟ್ಟಿಸಲು ಕಾರ್ಯಾಚರಣೆ ನಡೆಸಲಾಗುತ್ತಿತ್ತು ಯಾರು ಈ ದುರ್ಘಟನೆ ನೀರಿಕ್ಷೆ ಮಾಡಿರಲ್ಲಿ ಲ್ಲ ಕೆಲವು ಸಣ್ಣಪುಟ್ಟ ಲೋಪದೋಷವಾಗಿದೆ ಇದನ್ನು ಸಮಗ್ರ ತನಿಖೆಗೆ ನಿವೃತ್ತ ಮುಖ್ಯ ವನಪಾಲಕರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. 15 ದಿನಗಳಲ್ಲಿ ಸರ್ಕಾರಕ್ಕೆ ವರದಿ ನೀಡುತ್ತಾರೆ. ಪಾರದರ್ಶಕವಾದ ತನಿಖೆ ಆಗುತ್ತದೆ. ಆನೆ ಸಂಸ್ಮರಣೆಗಾಗಿ ಈ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡುವುದರ ಜೊತೆಗೆ ಅರ್ಜುನ ವಾಸವಿದ್ದ ಮೈಸೂರಿನ ನಾಗರಹೊಳೆ ಶಿಬಿರದಲ್ಲಿ ಚಿರಸ್ಥಾಯಿಯಾಗಿ ಉಳಿಯಲು ಅರ್ಜುನ ಅಂಬಾರಿ ಹೊತ್ತ ಹಾಗೂ ಅನೇಕ ಕಾರ್ಯಾಚರಣೆಗಳಲ್ಲಿ ಭಾಗವಹಿಸಿರುವ ಮಾಹಿತಿಗಳನ್ನು ಪ್ರದರ್ಶನ ಮಾಡುವ ಮೂಲಕ ಶಾಶ್ವತವಾಗಿ ಉಳಿಯುವಂತೆ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದರು.

ಇಂತಹ ಕಾರ್ಯಾಚರಣೆ ಅತ್ಯಂತ ಅಪಾಯ ಹಾಗೂ ಕಷ್ಟಕರವಾದದು, ಮುಂದೆ ಈ ರೀತಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆವಹಿಸಲು ಜನಪ್ರತಿನಿಧಿಗಳು, ತಜ್ಞರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕ್ರಮ ವಹಿಸಲಾಗುವುದು. ಸ್ಟ್ಯಾಂಡರ್ಡ್ ಅಪರೇಟಿಂಗ್ ಪ್ರೊಸಿಜರ್ ನಲ್ಲಿ (sop) ಕೆಲವು ಬದಲಾವಣೆ ತರಲು ಚಿಂತನೆ ಮಾಡಲಾಗುವುದು. ರಾಜ್ಯದಲ್ಲಿ ಅನೇಕ ವನ್ಯಮೃಗಗಳ ಸೆರೆ ಹಾಗೂ ಹಿಮ್ಮೆಟ್ಟಿಸುವ ಕಾರ್ಯಾಚರಣೆ ಯಲ್ಲಿ ಸಕ್ರಿಯವಾಗಿ ಅರ್ಜುನ ಭಾಗವಹಿಸಿದ್ದು ಅನೇಕ ಜನರ ಪ್ರಾಣ ಉಳಿಸಿದೆ ಎಂದರು.

ಜಿಲ್ಲೆಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಕಾಡಾನೆ ಗಳಿವೆ, ದೇಶದಲ್ಲಿಯೇ ಅತಿ ಹೆಚ್ಚು ಕರ್ನಾಟಕದಲ್ಲಿ ಸುಮಾರು 6395 ಕಾಡಾನೆಗಳು ಇದೆ. ವನ್ಯ ಮೃಗಗಳು ಕಾಡಿನಿಂದ ಆಚೆ ಬರುತ್ತಿದೆ ಎಂದರೆ ನಾಗರೀಕರಣ ಹೆಚ್ಚಾದಂತೆ ಇಂತಹ ಸಮಸ್ಯೆಗಳು ಉದ್ಭವಿಸುತ್ತಿದೆ. ಕಾಡಾನೆ ಸಮಸ್ಯೆ ತಡೆಯುವ ನಿಟ್ಟಿನಲ್ಲಿ ಹಾಗೂ ವನ್ಯಜೀವಿಗಳ ಉಪಟಳ ನಿಯಂತ್ರಿಸಲು ಹಂತ ಹಂತವಾಗಿ ಇಲಾಖೆ ಕ್ರಮ ಕೈಗೊಳ್ಳಲಿದೆ.ಈಗಾಗಲೇ ಕಾಡಾನೆ ಉಪಟಳ ನಿಯಂತ್ರಣಕ್ಕೆ ಕಂದಕ ನಿರ್ಮಾಣ, ಸೋಲಾರ್ ಫೆನ್ಸಿಂಗ್ ನಂತಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ತಿಳಿಸಿದರು.

ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಸಮಯಕ್ಕೆ ಸರಿಯಾಗಿ ಸಂಬಳ ವಿತರಿಸುವಂತೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಈ ಸಿಬ್ಬಂದಿಗಳಿಗೆ ಸಮವಸ್ತ್ರ ಹಾಗೂ ರಕ್ಷಣಾ ಸಲಕರಣೆ ಸೇರಿದಂತೆ ಎಲ್ಲ ರೀತಿಯ ಸೌಕರ್ಯವನ್ನು ಒದಗಿಸಲು ತಿಳಿಸಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂರಕ್ಷಣಾಧಿಕಾರಿ ಆರ್.ರವಿಶಂಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ಮತ್ತಿತರರು ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement