ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಉಡುಪಿ

ಉಡುಪಿ; ಖ್ಯಾತ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ಆತ್ಮಹತ್ಯೆಗೆ ಶರಣು

Published

on

ಉಡುಪಿ: ಖ್ಯಾತ ಸಮಾಜ ಸೇವಕ ಲೀಲಣ್ಣ ಎಂದು ಚಿರಪರಿಚಿತರಾಗಿದ್ದ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ,
ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಮ್ಯ ಸ್ವಭಾವದವರಾಗಿದ್ದ ಲೀಲಾಧರ ಶೆಟ್ಟಿಯವರು ಕಾಪುವಿನಲ್ಲಿ ರಂಗ ತರಂಗ ಎಂಬ ನಾಟಕ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಸದಾ ಸಮಾಜಪರ ಕಾಳಜಿ ಹೊಂದಿದ್ದ ಅವರು ಯಾವುದೇ ಕ್ಷಣದಲ್ಲಿ ಕೂಡ ಅಶಕ್ತರ ನೆರವಿಗೆ ಧಾವಿಸುತ್ತಿದ್ದರು. ಆದರೂ ಇತ್ತೀಚೆಗೆ ಹಣಕಾಸಿನ ತೊಂದರೆ ಕೂಡ ಹೊಂದಿದ್ದರು ಎನ್ನಲಾಗಿದೆ.ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಸಮಸ್ಯೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement