ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಮಾಧಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ, ಯುವ ಪೀಳಿಗೆ ಮಾಧಕ ವ್ಯಸನಕ್ಕೆ ಬಲಿಯಾಗುತ್ತಿದೆ. ಅಧಿವೇಶನದಲ್ಲಿ ಧ್ವನಿ ಎತ್ತಿದ ಅಶೋಕ್ ರೈ

Published

on

ಪುತ್ತೂರು: ಮಾಧಕ ವ್ಯಸನಿಗಳು ಸಮಾಜ ಕಂಠಕರಾಗುತ್ತಿದ್ದಾರೆ, ಯುವ ಪೀಳಿಗೆ ಮಾಧಕ ವ್ಯಸನಕ್ಕೆ ಬಲಿಯಾಗುತ್ತಿದೆ, ಇದು ಅತ್ಯಂತ ಗಂಭೀರ ವಿಚಾರವಾಗಿದ್ದು ಇದು ಹೀಗೇ ಮುಂದುವರೆದರೆ ವ್ಯಸನಿಗಳಿಂದ ರಾಜ್ಯಕ್ಕೆ, ದೇಶಕ್ಕೆ ತೊಂದರೆ ಉಂಟಾಗಬಹುದು, ಸಮಾಜವನ್ನು ಹಾಳು ಮಾಡುತ್ತಿರುವ ಇಂತವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈಯವರು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಮಾಧಕ ವ್ಯಸನಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ, ಯುವ ಸಮೂಹ ಇದಕ್ಕೆ ಬಲಿಯಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೧೪೭ ಪೆಡ್ಲರ್‌ಗಳ ವಿರುದ್ದ ಪ್ರಕರಣ ದಾಖಲಾಗಿದೆ, ೫೨೮ ಮಂದಿ ಮಾದಕ ವ್ಯಸನಿಗಳ ವಿರುದ್ದ ಪ್ರಕರಣ ದಾಖಲಾಗಿದೆ, ಪುತ್ತೂರಿನಲ್ಲಿ ೨೬ ಪ್ರಕರಣಗಳು ದಾಖಲಾಗಿದೆ. ಇದನ್ನು ನಿಯಂತ್ರಣ ಮಾಡಲು ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.

ವ್ಯಸನ ಮುಕ್ತ ಕೇಂದ್ರಗಳನ್ನು ಆರಂಭಿಸಿ:

ರಾಜ್ಯದ ಪ್ರತೀ ತಾಲೂಕುಗಳಲ್ಲಿ ಡಿ ಎಡಿಕ್ಸನ್ ಸೆಂಟರ್‌ಗಳನ್ನು ಆರಂಭಿಸಬೇಕು. ಈ ಕೇಂದ್ರಗಳಲ್ಲಿ ಅವರಿಗೆ ಚಿಕಿತ್ಸೆಯನ್ನು ನೀಡಬೇಕಿದೆ. ಪೊಲೀಸ್ ಇಲಾಖೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ನಿರ್ಜನ ಪ್ರದೇಶಗಳ ಬಗ್ಗೆ ಪೊಲೀಸರು ಹೆಚ್ಚು ನಿಗಾ ಇಡಬೇಕು, ಕೆಲವು ಕಡೆಗಳಲ್ಲಿ ವೆಂಟೆಡ್ ಡ್ಯಾಮ್‌ಗಳ ಬಳಿ ಈ ವ್ಯವಹಾರಗಳು ಹೆಚ್ಚಾಗಿ ನಡೆಯುತ್ತಿದೆ. ಇದೆಲ್ಲವನ್ನೂ ತಡೆಗಟ್ಟುವ ಮೂಲಕ ಪೊಲೀಸ್ ಇಲಾಖೆ ಮಾಧಕ ವ್ಯಸನಿಗಳ ಭೇಟೆಯಾಡಬೇಕು ಎಂದು ಶಾಸಕರು ಆಗ್ರಹಿಸಿದರು.

ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಮಾಡಿ:

ಪ್ರತೀ ಶಾಲಾ ಕಾಲೇಜುಗಳಲ್ಲಿ ಮಾಧಕ ದ್ರವ್ಯ ವ್ಯಸನದಿಂದ ಅಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಮಾಡಬೇಕು. ಈ ರೀತಿಯ ಕಾರ್ಯಕ್ರಮವನ್ನು ಮಾಡುವ ಮೂಲಕ ಯುವ ಸಮೂಹ ಮತ್ತು ಯುವ ವಿದ್ಯಾರ್ಥಿ ಸಮೂಹ ಈ ಚಟಗಳಿಗೆ ಬಲಿಯಾಗದಂತೆ ಎಚ್ಚರಿಕಾ ವ್ಯವಸ್ಥೆಗಳನ್ನು ಮಾಡಬೇಕು ಎಂದು ಶಾಸಕರು ಸರಕಾರವನ್ನು ಆಗ್ರಹಿಸಿದರು.


ಪುತ್ತೂರಿನಲ್ಲಿ ಡಿಎಡಿಕ್ಸನ್ ಸೆಂಟರ್ ಗೆ ಮನವಿ:

ಪುತ್ತೂರಿನಲ್ಲಿ ಡಿ ಎಡಿಕ್ಸನ್ ಸೆಂಟರ್ ಪ್ರಾರಂಭ ಮಾಡುವಂತೆ ಶಾಸಕರು ಗೃಹ ಸಚಿವರಾದ ಡಾ. ಎಚ್ ಜಿ ಪರಮೇಶ್ವರ್ ಅವರಲ್ಲಿ ಮನವಿ ಮಾಡಿದರು. ಈ ವಿಚಾರವನ್ನು ಪರಿಶೀಲನೆ ಮಾಡುವುದಾಗಿ ಸಚಿವರು ಭರವಸೆ ನೀಡಿದರು. ದ ಕ ಜಿಲ್ಲೆಯಲ್ಲಿ ಮಂಗಳೂರಿನಲ್ಲಿ ಮಾತ್ರ ಡಿ ಎಡಿಕ್ಸನ್ ಕೇಂದ್ರವಿದ್ದು ಉಪ ವಿಭಾಗವಾದ ಪುತ್ತೂರಿನಲ್ಲಿ ವ್ಯಸನ ಮುಕ್ತ ಕೇಂದ್ರವನ್ನು ಆರಂಭಿಸಬೇಕು ಎಂದು ಶಾಸಕರು ಮನವಿ ಮಾಡಿದರು.

ಮಾಧಕ ವ್ಯಸನಿಗಳ ವಿರುದ್ದ ಯುದ್ದ ಸಾರಿದ್ದೇವೆ: ಗೃಹ ಸಚಿವರು

ಮಾಧಕ ವ್ಯಸನಿಗಳಿಂದ ಸಮಾಜಕ್ಕೆ ಕಂಠಕ ಉಂಟಾಗುತ್ತಿದೆ. ಇಂಥವರ ವಿರುದ್ದ ಸರಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವ್ಯಸನಿಗಳ ಭೇಟೆಯಾಡುತ್ತಿದ್ದೇವೆ. ಈಗಾಗಲೇ ರಾಜ್ಯಾದ್ಯಂತ ಕಾರ್ಯಾಚರಣೆ ಪ್ರಾರಂಭವಾಗಿದೆ. ನೂರಾರು ಕೋಟಿ ರೂ ಬೆಲೆ ಬಾಳುವ ಮಾಧಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜ್ಯದಲ್ಲೇ ಅತೀ ಹೆಚ್ಚು ಅಂದರೆ ಸುಮಾರು ೨೧ ಕೋಟಿ ರೂ ಮೌಲ್ಯದ ಮಾಧಕ ವಸ್ತುಗಳನ್ನು ಒಂದೇ ದಿನದಲ್ಲಿ ವಶಕ್ಕೆ ಪಡೆಯಲಾಗಿದೆ. ದ ಕ ಜಿಲ್ಲೆಯನ್ನು ಒಂದು ವರ್ಷದೊಳಗೆ ವ್ಯಸನ ಮುಕ್ತ ಅಥವಾ ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡುವುದಾಗಿ ಪೊಲೀಸರು ಒಪ್ಪಿಕೊಂಡಿದ್ದು ಅದನ್ನು ಚಾಲೆಂಜಗಿ ಸ್ವೀಕರಿಸಿದ್ದಾರೆ. ಮಾಧಕ ವ್ಯಸನಿಗಳ ಮತ್ತು ಅದನ್ನು ಮರಾಟ ಮಾಡುವ ದುಷ್ಕರ್ಮಿಗಳ ವಿರುದ್ದ ನಾವು ಈಗಾಗಲೇ ಯುದ್ದವನ್ನೇ ಸಾರಿದ್ದು , ಈಗಾಗಲೇ ರಾಜ್ಯದಲ್ಲಿ ೪೬ ಕಡೆಗಳಲ್ಲಿ ವಿಶೇಷ ಠಾಣೆಗಳನ್ನು ತೆರೆಯಲಾಗಿದೆ,ಇದರಲ್ಲಿ ಯವುದೇ ರಾಜಿಯಿಲ್ಲ ಎಂದು ಗೃಹ ಸಚಿವ ಡಾ. ಎಚ್ ಜಿ ಪರಮೇಶ್ವರ್ ಅವರು ಸಭೆಯಲ್ಲಿ ಸಪಷ್ಟಪಡಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement