ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಉಡುಪಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ದಕ್ಷಿಣ ಕನ್ನಡ ಪ್ರಕಟಣೆ ಮಂಗಳೂರು ಮಾಹಿತಿ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ರಾಜ್ಯದಾದ್ಯಂತ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ. ದಕ್ಷಿಣ ಕನ್ನಡ : ಸತೀಶ್ ಕುಂಪಲ ಉಡುಪಿ: ಕಿಶೋರ್ ಕುಂದಾಪುರಇತ್ತೀಚಿನ ಸುದ್ದಿಗಳು ಉಡುಪಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ದಕ್ಷಿಣ ಕನ್ನಡ ಧಾರ್ಮಿಕ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸ್ಥಳೀಯ
ಜನವರಿ 14ರ ನಂತರ ರಾತ್ರಿ ಇಡೀ ಯಕ್ಷಗಾನ ಕಾಲಮಿತಿ ತೆರವು. ಕೋರ್ಟ್ ಆದೇಶ ಮತ್ತು ಭಕ್ತರ ಅಪೇಕ್ಷೆಯ ಮೇರೆಗೆ . ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿಉಡುಪಿ ಉತ್ತರಕನ್ನಡ ಕರ್ನಾಟಕ ಕಲ್ಬುರ್ಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ ಚಿಕ್ಕಮಗಳೂರು ಚಿತ್ರದುರ್ಗ ತಾಜಾ ಸುದ್ದಿ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್ ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಬೆಳಗಾವಿ ಮಂಡ್ಯ ಮೈಸೂರು ಯಾದಗಿರಿ ರಾಜಕೀಯ ರಾಮನಗರ ರಾಯಚೂರು ವಿಜಯನಗರ ವಿಜಯಪುರ ಶಿವಮೊಗ್ಗ ಸಂಪಾದಕೀಯ ಹಾವೇರಿ ಹಾಸನ
Bengaluru Bandh: ಸಾರಿಗೆ ಸಚಿವರ ಸಂಧಾನ ಸಕ್ಸಸ್! ಮುಷ್ಕರ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟPublished
2 years agoon
By
Akkare News
ಉಡುಪಿ: ಸಾಕು ಮಗಳು ಮನೆಯಿಂದ ನಾಪತ್ತೆಯಾದ ಕಾರಣ ಮನನೊಂದು ನೇಣಿಗೆ ಶರಣಾದ ಸಮಾಜ ಸೇವಕ ಕೆ.ಲೀಲಾಧರ ಶೆಟ್ಟಿ ದಂಪತಿಯ ಸಾವಿಗೆ ಕಾರಣರಾದ ಸಾಕು ಪುತ್ರಿಯನ್ನು ಕಾಪು ಪೊಲೀಸರು ಕುಂಬಳೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.ಅಪ್ರಾಪ್ತ ವಯಸ್ಸಿನ ಸಾಕು ಮಗಳು, ಆಕೆಯ ಪ್ರಿಯಕರ ಮತ್ತು ಆತನಿಗೆ ನೆರವಾದ ಇತರ ಮೂವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಮುಂದುವರಿಸಿದ್ದಾರೆ.



ಬಾಲಕಿಯ ಪ್ರಿಯಕರ ಶಿರ್ವ ನಿವಾಸಿ ಗಿರೀಶ್, ಆತನಿಗೆ ನೆರವಾದ ರೂಪೇಶ್, ಅಜೀಜ್ ಮತ್ತು ಜಯಂತ್ ಪೊಲೀಸ್ ಬಂಧಿತರು. ಬಂಧಿತರನ್ನು ತೀವ್ರ ವಿಚಾರಣೆಗೊಳಪಡಿಸಿರುವ ಪೊಲೀಸರು ಎರಡು ಸ್ಕೂಟಿಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ಗಿರೀಶ್ ವಿರುದ್ಧ ಅಪಹರಣ, ಅತ್ಯಾಚಾರ ಮತ್ತು ಪೋಕೋ ಆಕ್ಟ್ ನಂತೆ ಪ್ರಕಾರ ದಾಖಲಾಗಿದ್ದು ಉಳಿದ ಮೂವರ ವಿರುದ್ದ ಆರೋಪಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕಾಪು ಪೊಲೀಸರು ತಿಳಿಸಿದ್ದಾರೆ. ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ, ಡಿವೈಎಸ್ಪಿ ಅರವಿಂದ ಕಲಗುಜ್ಜಿ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ, ಕಾಪು ಎನ್ನೈ ಅಬ್ದುಲ್ ಖಾದರ್, ಕ್ರೈಂ ಎಸ್ಟ್ ಪುರುಷೋತ್ತಮ್ ನೇತೃತ್ವದಲ್ಲಿ ಸಿಬಂದಿಗಳು ಕಾರ್ಯಾಚರಣೆ ನಡೆಸಿದ್ದರು.