ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಮಂಗಳೂರು

ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಮೊದಲ ಆದ್ಯತೆ. ಶಾಸಕ ಅಶೋಕ್ ಕುಮಾರ್ ರೈ

Published

on

ಪುತ್ತೂರು: ಖಾಸಗಿ ಶಾಲೆಗಿಂತ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಣಣ ದೊರೆಯುತ್ತಿದ್ದು ಈ ಕಾರಣಕ್ಕೆ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ವೃದ್ದಿಸುತ್ತಲೇ ಇದೆ ಎಂದು ಶಾಸಕ ಅಶೋಕ್ ರೈ ಹೇಳಿದರು.
ಅವರು ಇಡ್ಕಿದು ಗ್ರಾಮದ ಓಜಾಲ ಸರಕಾರಿ ಹಿ ಪ್ರಾ ಶಾಲೆಯ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದರು.
ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕಾಗಿ ಎರಡು ಗ್ರಾಮಕ್ಕೊಂದು ಕೆಪಿಎಸ್ ಸ್ಕೂಲ್ ಆರಂಭ ಮಾಡಲಾಗುವುದು. ಪೋಷಕರ ಮನಸ್ಥಿತಿ ಬದಲಾಗಬೇಕಿದೆ,ಸರಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸುವ ಮೂಲಕ ಶಾಲೆಗಳನ್ನು ಉಳಿಸುವ ಕೆಲಸ ಮಾಡಬೇಕು.


ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳನ್ನು ಮುಖ್ಯ ಶಾಲೆಗೆ ಮರ್ಜಿ ಮಾಡುವ ಪ್ರಕ್ರಿಯೆ ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭವಾಗಲಿದೆ. ಶಾಲೆಯಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲಾಗಿದೆ ಎಂದು ಶಾಸಕರು ಹೇಳಿದರು. ಮಕ್ಕಳಿಗೆ ಶಾಲೆಯಲ್ಲಿ ಉತ್ತಮ ವಾತಾವರಣ ಸೃಷ್ಟಿಸುವಲ್ಲಿ ಪೋಷಕರು ಮತ್ತು ಶಿಕ್ಷಕರು ಶಕ್ತಿ ಮೀರಿ ಕೆಲಸ ಮಾಡಬೇಕು ಎಂದು ಹೇಳಿದರು.



ವೇದಿಕೆಯಲ್ಲಿ ಎಸ್ ಡಿಂಎಂಸಿ ಅಧ್ಯಕ್ಷ ಸದಾನಂದ ಪೆಲತಿಂಜ ಇಡ್ಕಿದು ಗ್ರಾಪಂ ಅಧ್ಯಕ್ಷೆ ಮೋಹಿನಿ ಜಯಕರ, ಉಪಾಧ್ಯಕ್ಷ ಪದ್ಮನಾಭ ಸಫಲ್ಯ, ಗ್ರಾಪಂ ಸದಸ್ಯೆ ಸಿದ್ದಿಕ್ ,ದೈಹಿಕ ಶಿಕ್ಷಕ ವಿಷ್ಣು ಹೆಬ್ಬಾರ್,ಪಿಡಿಒ ಗೋಕುಲ್ ದಾಸ್ ಭಕ್ತ,,ಸಿಆರ್ ಪಿ ಜ್ಯೋತಿ,ಮಿಥುನ್ ದಾನಿಗಳು, ರಮೇಶ್ ಬಾಯಾರ್ ಕಲಾವಿದ,ಕೊಡಿಪ್ಪಾಡಿ ಗ್ರಾಪಂ ಅಧ್ಯಕ್ಷ ಸೋಮಶೇಖರ ಪೂಜಾರಿ,ಅಬ್ದುಲ್ ಖಾದರ್ ನೂರುಲ್ ಹುದಾ ಮದ್ರಸ ಅಧ್ಯಕ್ಷ,,ಎಸ್ ಡಿಎಂಸಿ ಉಪಾಧ್ಯಕ್ಷೆ ಸುಮಯಾ,ಮುಖ್ಯ ಗುರುಗಳಾದ ಸಂಜೀವ ಮಿತ್ತಳಿಕೆ ಮೊದಲಾದವರು ಉಪಸ್ಥಿತರಿದ್ದರು.ಶಿಕ್ಷಕಿ ವಿಲ್ಮಾ ಸಿಕ್ವೆರಾ ಸ್ವಾಗತಿಸಿದರು. ಸಹ ಶಿಕ್ಷಕಿ ಜೆಸಿಂತಾ ಲೋಬೋ,ರೇಖಾ ಕಾರ್ಯಕ್ರಮ‌ನಿರೂಪಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version