ನಮ್ಮೊಂದಿಗೆ ಸಂಪರ್ಕ ಸಾಧಿಸಿ

ತಾಜಾ ಸುದ್ದಿ

ನಟ, ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಅಧಿಕೃತ ಆಹ್ವಾನ

Published

on

ಬೆಂಗಳೂರು; ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 22ರಂದು ಅದ್ಧೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಭ್ ಶೆಟ್ಟಿ ಅವರಿಗೆ ಅಧಿಕೃತ ಆಹ್ವಾನ ದೊರೆತಿದೆ.

ಕಾರ್ಯಕ್ರಮಕ್ಕೆ ದೇಶದ ಹಲವು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿದೆ. ತಮಿಳಿನಿಂದ ರಜನಿಕಾಂತ್, ಮಲಯಾಳಂ ಚಿತ್ರರಂಗದಿಂದ ಮೋಹನ್ ಲಾಲ್, ತೆಲುಗು ಚಿತ್ರರಂಗದಿಂದ ಚಿರಂಜೀವಿ ಅವರಿಗೆ ಆಹ್ವಾನ ನೀಡಲಾಗಿದ್ದು, ಸ್ಯಾಂಡಲ್ವುಡ್ ನಿಂದ ರಿಷಭ್ ಶೆಟ್ಟಿ ಒಬ್ಬರಿಗೇ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ. ಉಳಿದಂತೆ ಕರ್ನಾಟಕದಿಂದ ಸುಮಾರು 250 ಮಂದಿ ಗಣ್ಯರಿಗೆ ಆಹ್ವಾನ ನೀಡಲಾಗಿದ್ದು, ಅದರಲ್ಲಿ ನಟ ರಿಷಭ್ ಶೆಟ್ಟಿ ಕನ್ನಡ ಚಿತ್ರರಂಗದ ಪರವಾಗಿ ಭಾಗಿ ಯಾಗಲಿದ್ದಾರೆ.
ಕಾಂತಾರ‘ ಚಿತ್ರದ ಮೂಲಕ ಸಂಚಲನ ಸೃಷ್ಟಿಸಿ ಹಲವು ಪ್ರಶಸ್ತಿ ಗಳನ್ನು ಮುಡಿಗೇರಿಸಿಕೊಂಡು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿ ಕೊಂಡಿರುವ ರಿಷಬ್ ಶೆಟ್ಟಿ ಅವರನ್ನು ಈ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಇದೀಗ ರಾಮ ಮಂದಿರ ಉದ್ಘಾಟನೆಯಂತಹ ಮಹತ್ವದ ಕಾರ್ಯಕ್ರಮಕ್ಕೆ ಆಹ್ವಾನ ಬಂದಿರುವುದು ರಿಷಭ್ ಶೆಟ್ಟಿಯವರ ಹೆಗ್ಗಳಿಕೆಯನ್ನು ಹೆಚ್ಚಿಸಿದೆ.


Continue Reading
Click to comment

Leave a Reply

Your email address will not be published. Required fields are marked *

Advertisement