ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!Published
10 months agoon
By
Akkare Newsಇದುವರೆಗೂ ಅಡಿಕೆ ಧಾರಣೆ 500 ಆಗುತ್ತದೆ, 550 ಆದರೂ ಅಚ್ಚರಿ ಇಲ್ಲ..! ಹೀಗೆನ್ನುತ್ತಾ ಇರುವಾಗ, ಅಡಿಕೆ ಮಾರುಕಟ್ಟೆ ಸ್ಥಿರತೆ ಇಲ್ಲ, ಧಾರಣೆ ಇಳಿಕೆಯಾಗಬಹುದು, ಮಾರುಕಟ್ಟೆ ಎಚ್ಚರ ಇರಲಿ, ವಿಪರೀತ ಹುಚ್ಚು ಮಾರುಕಟ್ಟೆ ಒಳ್ಳೆಯದಲ್ಲ… ಹೀಗೆಲ್ಲಾ ಹೇಳುತ್ತಿದ್ದಾಗ, ಇದೆಲ್ಲಾ ಧಾರಣೆ ಇಳಿಕೆಯ ಆಟ ಎನ್ನುತ್ತಿದ್ದರು ಹಲವಾರು ಮಂದಿ. ಈಗ ಅಡಿಕೆಯ ಅಸಲಿ ಲೆಕ್ಕ ಸಿಕ್ಕಿದೆ. ಅಡಿಕೆ ಮಾರುಕಟ್ಟೆಯಲ್ಲಿ ಇಳಿಕೆ ಕಂಡಿದೆ.
ಅಡಿಕೆ ಧಾರಣೆ ಇಳಿಕೆಗೆ ಕಾರಣ, ಸದ್ದಿಲ್ಲದೆ ವಿದೇಶ ಅಡಿಕೆ ಒಳನುಸುಳುತ್ತಿದೆ. ಭಾರೀ ಎಚ್ಚರಿಕೆಯಲ್ಲಿದ್ದ ಗಡಿ ಭಾಗಗಳೆಲ್ಲವೂ ಮೌನವಾಗಿದೆ.ಈಗ ಅಡಿಕೆ ಮಾರುಕಟ್ಟೆ ಉಳಿಸಿಕೊಳ್ಳಲು ಇನ್ನೂ ಕುಸಿತವಾಗದಂತೆ ಎಚ್ಚರವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಕ್ಯಾಂಪ್ಕೋ ಸಹಿತ ವಿವಿಧ ಸಂಸ್ಥೆಗಳು ಈಗಾಗಲೇ ಇಲಾಖೆಗಳಿಗೆ, ಸರ್ಕಾರವನ್ನು ಎಚ್ಚರಿಸಿದೆ. ಕ್ಯಾಂಪ್ಕೋ ಈ ಬಗ್ಗೆ ಸರ್ಕಾರದ ಗಮನ ಸೆಳೆದಿದೆ. ಅಡಿಕೆ ಬೆಳೆಗಾರರಿಗೆ ಆಗುವ ಸಂಕಷ್ಟದ ಬಗ್ಗೆ ವಿವರವಾಗಿ ಪ್ರಧಾನಿಗಳಿಗೂ ತಿಳಿಸಿದೆ. ಈಗ ಅಡಿಕೆ ಬೆಳೆಯುವ ಪ್ರದೇಶದ ಸಂಸದರೂ , ಶಾಸಕರುಗಳೂ ಧ್ವನಿಗೂಡಿಸಿ ಸರ್ಕಾರದ ಗಮನ ಸೆಳೆಯಬೇಕಿದೆ. ಅಡಿಕೆ ಅಕ್ರಮವಾಗಿ ಆಮದು ತಡೆಗೆ ಕ್ರಮಕ್ಕೆ ಒತ್ತಾಯಿಸಬೇಕಿದೆ.
ಅಡಿಕೆ ಕಳೆದ ವಾರ ಹಳೆ ಚಾಲಿ ಅಡಿಕೆಗೆ 430-435 ರೂಪಾಯಿ ಇದ್ದರೆ ಹೊಸ ಚಾಲಿ ಅಡಿಕೆಗೆ 350-370 ರೂಪಾಯಿವರೆಗೂ ಇತ್ತು. ಇದೀಗ ಹೊಸ ಚಾಲಿ ಅಡಿಕೆ ದರ 350-370 ಆಸುಪಾಸಿನಲ್ಲೇ ಇದ್ದರೆ ಹಳೆ ಚಾಲಿ ಅಡಿಕೆ 405 ರಿಂದ 415 ರೂಪಾಯಿವರೆಗೆ ಇಳಿಕೆಯಾಗಿದೆ. ಖಾಸಗಿ ಮಾರುಕಟ್ಟೆಯಲ್ಲಿ 405-407 ರೂಪಾಯಿಗೆ ಖರೀದಿ ನಡೆದಿದೆ. ಈಗ ಇನ್ನಷ್ಟು ಧಾರಣೆ ಕುಸಿತವಾಗುತ್ತದೆ ಎನ್ನುವ ಭಯದ ವಾತಾವರಣ ಮಾರುಕಟ್ಟೆಯಲ್ಲಿದೆ. ಆದರೆ ಅಂತಹ ಬೇಡಿಕೆ ಕುಸಿತವಾಗಿಲ್ಲ. ಆಮದು ಅಡಿಕೆ ಒಳಬರುತ್ತಿರುವ ಸುದ್ದಿ ಹಾಗೂ ಯಾವುದೇ ತಡೆ ಇಲ್ಲದೇ ಇರುವುದು ಭಯದ ವಾತಾವರಣಕ್ಕೆ ಕಾರಣವಾಗಿದೆ. ಇದಕ್ಕಾಗಿ ಈಗ ತಕ್ಷಣಕ್ಕೆ ಅಡಿಕೆ ಅಕ್ರಮವಾಗಿ ಆಮದಾಗುವುದಕ್ಕೆ ತಡೆ ಆಗಬೇಕಿದೆ. ಇದೇ ವೇಳೆ ವಿವಿದಡೆ ಅಡಿಕೆ ದರ ಕ್ವಿಂಟಾಲ್ಗೆ ಹೀಗಿದೆ, ಬೆಟ್ಟೆ?
ಅಡಿಕೆ ಬೆಳೆಗಾರರು ಕೂಡಾ ಈಗ ಧಾರಣೆ ಕುಸಿತದ ಭೀತಿಯ ಸಂದೇಶದ ಬೆನ್ನಲ್ಲೇ ಸಿಕ್ಕ ಸಿಕ್ಕಲ್ಲಿ ಅಡಿಕೆಯನ್ನು ಮಾರುಕಟ್ಟೆಗೆ ತಳ್ಳಿದರೆ ನಿಶ್ಚಿತವಾಗಿಯೂ ಧಾರಣೆ ಇನ್ನಷ್ಟು ಕುಸಿತವಾಗಬಹುದು. ಸದ್ಯ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ, ಅಡಿಕೆ ಧಾರಣೆಯೂ ಏರಿಕೆ ಸಾಧ್ಯತೆ ಇದೆ. ಚಾಲಿ ಅಡಿಕೆಗೆ 425-430 ರೂಪಾಯಿ ಉಳಿಸಿಕೊಳ್ಳಬಹುದಾಗಿದೆ. ಹೊಸ ಚಾಲಿ ಅಡಿಕೆಗೆ 400+ ಏರಿಕೆ ಆಗಬಹುದಾಗಿದೆ.ಅಡಿಕೆ ಕಳ್ಳಸಾಗಾಣಿಕೆ ನಿರಾತಂಕವಾಗಿ ಸಾಗಲು ಅಡಿಕೆ ಕಳ್ಳಸಾಗಾಣಿಕೆದಾರರು ಈಚೆಗೆ ತ್ರಿಪುರಾದ ಅಡಿಕೆ ಬೆಳೆಗಾರರನ್ನೂ ಬಳಸಿಕೊಂಡಿದ್ದರು. ತ್ರಿಪುರಾದ ಉತ್ತರ ಜಿಲ್ಲೆಯ ಜಂಪುಯಿ ಹಿಲ್ಸ್ನ ಅಡಿಕೆ ಬೆಳೆಗಾರರು ತಮ್ಮ ಅಡಿಕೆ ಬೆಳೆ ಸಾಗಾಣಿಕೆಗೆ ಸೂಕ್ತವಾದ ಅವಕಾಶ ನೀಡಬೇಕು ಎಂದು ಇಲಾಖೆಗಳಿಗೆ ಪತ್ರ ಬರೆದಿದ್ದರು. ಕಳೆದ ಕೆಲವು ಸಮಯಗಳ ಹಿಂದೆಯೂ ಈ ಮಾದರಿಯ ಪ್ರಯತ್ನ ಕಳ್ಳಸಾಗಾಣಿಕೆ ತಂಡದ ಮಾಡಿತ್ತು, ಅದು ವಿಫಲವಾಗಿತ್ತು. ಮೂರು ಲಾರಿಗಳೂ ಈ ಘಟನೆಯನ್ನು ಸುಡಲಾಗಿತ್ತು.ಈಗ ತ್ರಿಪುರಾದಲ್ಲಿ ಸರಿಯಾದ ಅಡಿಕೆ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಲು ಒತ್ತಾಯಿಸಲಾಗಿದೆ. ದೊಡ್ಡ ಪ್ರಮಾಣದ ಅಕ್ರಮ ಬರ್ಮಾ ಅಡಿಕೆ ಆಮದು ಮತ್ತು ಕೆಲವು ಕಿಡಿಗೇಡಿಗಳು ಅಸ್ಸಾಂನಲ್ಲಿ ಸುಲಿಗೆ ಮಾಡುವುದನ್ನು ತಪ್ಪಿಸುವ ಕಾರಣ ಮುಂದಿಡಲಾಗಿದೆ. ಇದೆಲ್ಲಾ ಸೂಕ್ತ ರೀತಿಯಲ್ಲಿ ಜಾರಿಯಾದರೆ ಅಡಿಕೆ ಅಕ್ರಮ ಆಮದು ತಡೆಗೆ ಸಾಧ್ಯವಿದೆ.