ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈPublished
2 years agoon
By
Akkare News
ಮನೆಗೂ ಬೆಳಕು, ಮನೆಯ ದಾರಿಗೂ ಹೊಳಪು : ಶಾಸಕ ಅಶೋಕ್ ಕುಮಾರ್ ರೈ
ಪುತ್ತೂರು: ಡಿ.24.ರಾಜ್ಯದ ಕಾಂಗ್ರೆಸ್ ಸರಕಾರದ 5 ಗ್ಯಾರಂಟಿ ಯೋಜನೆಯಿಂದ ರಾಜ್ಯದ ಪ್ರತೀ ಮನೆಯೂ ಬೆಳಗಿದೆ, ಮನೆ ಬೆಳಗಿಸಿದ ಸರಕಾರ ಮನೆಗೆ ಹೋಗುವ ದಾರಿಗೂ ಕಾಂಕ್ರೀಟ್ ಸೌಲಭ್ಯಕ್ಕೆಅನುದಾನ ನೀಡಿ ಮನೆಯ ದಾರಿಯನ್ನೂ ಬೆಳಗಿಸುವ ಕಾರ್ಯ ಮಾಡುತ್ತಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಪಾಣಾಜೆ ಗ್ರಾಮದ ವಿವಿಧ ಕಡೆಗಳಲ್ಲಿ ರೂ 1.27 ಕೋಟಿ ರೂ ಅನುದಾನದಲ್ಲಿ ರಸ್ತೆ, ಅಂಗನವಾಡಿ ಹಾಗೂ ಶಾಲಾ ದುರಸ್ಥಿಗೆ ಅನುದಾನವನ್ನು ಒದಗಿಸಲಾಗಿದೆ. ಪಾಣಾಜೆ ಗ್ರಾಮದಲ್ಲಿ ಈ ಹಿಂದೆ ಅಭಿವೃದ್ದಿ ಕಾರ್ಯಗಳು ನಡೆದಿಲ್ಲ. ಗ್ರಾಮೀಣ ರಸ್ತೆಗಳು ಸಂಪೂರ್ಣ ಹದಗಡಟ್ಟಿತ್ತು ಇದನ್ನು ಮನಗಂಡು ಅತ್ಯಂತ ಗೆಚ್ಚು ಅನುದಾನವನ್ನು ನೀಡಲಾಗಿದೆ. ಅಗತ್ಯ ಇರುವ ಕಡೆಗಳಿಗೆ ಹೆಚ್ಚಿನ ಅನುದಾನವನ್ನು ನೀಡಲಾಗಿದೆ ಎಂದು ಹೇಳಿದರು.
ನಾನು ರಾಜಕೀಯ ಮಾಡುವುದಿಲ್ಲ:
ನಾನು ಅಭಿವೃದ್ದಿಯಲ್ಲಿ ಎಂದೂ ರಾಜಕೀಯಮಾಡುವುದಿಲ್ಲ, ಗ್ರಾಮದ ಎಲ್ಲಾ ವಾರ್ಡುಗಳಿಗೂ ಸಮಾನ ರೀತಿಯಲ್ಲಿ ಅನುದಾನ ನೀಡುತ್ತಿದ್ದೇನೆ. ಸರಕಾರದ ಗ್ಯಾರಂಟಿ ಯೋಜನೆಯ ಕಾರಣಕ್ಕೆ ಕಾಮಗಾರಿಗೆ ಅನುದಾನ ಸರಕಾರ ಕೊಡುವುದಿಲ್ಲ ಎಂದು ಅಪಪ್ರಚಾರ ಮಾಡಿದ್ದ ಬಿಜೆಪಿಗರು ಈಗ ಏನು ಹೇಳುತ್ತಿದ್ದಾರೆ ಎಂಬುದನ್ನು ತಿಳಿಸಲಿ. ಗ್ರಾಮಕ್ಕೆ ಒಂದು ಕೋಟಿಗೂಮಿಕ್ಕಿ ಅನುದಾನ ನೀಡಿದ್ದೇನೆ ,ಇನ್ನೂ ನೀಡುತ್ತೇನೆ ಎಂದು ಶಾಸಕರು ಹೇಳಿದರು.




ಗ್ರಾಪಂ ಅಧ್ಯಕ್ಷೆ ಮೈಮೂನತುಲ್ ಮೆಹ್ರಾ,ಪಾಣಾಜೆ ರಣಮಂಗಳ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಕೃಷ್ಣ ಬೊಳಿಲ್ಲಾಯ ಕಡಮಾಜೆ,ಉಪಾಧ್ಯಕ್ಷರು ಜಯಶ್ರೀ ,ಗ್ರಾಪಂ ಸದಸ್ಯ ನಾರಾಯಣ ನಾಯ್ಕ ಅಪಿನಿಮೂಲೆ, ಕೃಷ್ಣಪ್ಪ ಪೂಜಾರಿ ಬೊಳ್ಳಿಂಬಲ, ವಿಮಲ ಮಾಲಿಂಗ ನಾಯ್ಕ, ವಲಯಾಧ್ಯಕ್ಷ ಉಮ್ಮರ್ ಜನಪ್ರಿಯ, ಬಾಬು ರೈ ಕೋಟೆ, ಬಿಜೆಪಿ ಶಕ್ತಿಕೇಂದ್ರದ ಸದಾಶಿವ ರೈ ಸೂರಂಬೈಲು, ಲಕ್ಣ್ಮೀ ನಾರಾಯಣ ರೈ ಕೆದಂಬಾಡಿ, ಜಗನ್ಮೋಹನ್ ರೈ,ಅಬೂಬಕ್ಕರ್ ಆರ್ಲಪದವು, ವಿಶ್ವನಾಥ ರೈ, ಅದ್ರು ಆರ್ಲಪದವು, ಖಾಲಿದ್ ಬೊಳ್ಳಿಂಬಲ, ಅಲಿಕುಂಞಿ ಆರ್ಲಪದವು, ಎ ಕೆ ಆರ್ಲಪದವು, ಸೀತಾ ಉದಯಶಂಕರ ಭಟ್,ಕುಂಞಿ ಮಣಿಯಾಣಿ, ಉಪೇಂದ್ರ ಬಲ್ಯಾಯ, ನಾರಾಯಣ ನಾಯ್ಕ ಹಾರಿಸ್ ಆರ್ಲಪದವು,ಅನಂತ ರಾಮ,ಮಹಾಲಿಂಗ ಮಣಿಯಾಣಿ,ರತ್ನಾವತಿ, ತಮ್ಮಣ್ಣ ನಾಯ್ಕ,ನಾರಾಯಣ ಪೂಜಾರಿ ನಡುಕಟ್ಟ,ಮತ್ತಿತರರು ಉಪಸ್ಥಿತರಿದ್ದರು. ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಪ್ರಸಾದ್ ಪಾಣಾಜೆ ಸ್ವಾಗತಿಸಿ ವಂದಿಸಿದರು



