ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ್ ಪೂಜಾರಿ, ವಿಧಾನಸಭೆಯ ವಿಪಕ್ಷ ಉಪನಾಯಕನಾಗಿ ಅರವಿಂದ್ ಬೆಲ್ಲದ

Published

on

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ.


ಎನ್ ರವಿ ಕುಮಾರ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವರ ನಡುವೆ ವಿಧಾನಪರಿಷತ್ ವಿಪಕ್ಷ ಸ್ಥಾನಕ್ಕೆ ಪೈಪೋಟಿ ಇತ್ತು. ಅಂತಿಮವಾಗಿ ನಿರೀಕ್ಷೆಯಂತೆ ಬಿಜೆಪಿ ಹೈಕಮಾಂಡ್, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಣೆ ಹಾಕಿದೆ.ವಿಧಾನಪರಿಷತ್ ವಿಪಕ್ಷ ನಾಯಕನ ಜೊತೆಗೆ ವಿಧಾನಸಭೆ ಉಪ ನಾಯಕ, ಮುಖ್ಯ ನಚೇತಕರನ್ ಸಹ ನೇಮಕ ಮಾಡಲಾಗಿದೆ.




ವಿಧಾನಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಿದರೆ.. ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕವಾಗಿದ್ದಾರೆ.ಇನ್ನು ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾದರೆ, ವಿಧಾನಪರಿಷತ್‌ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ. ಅರವಿಂದ ಬೆಲ್ಲದ್ ಅವರಿಗೆ ವಿಧಾನಸಭೆ ವಿಪಕ್ಷ ನಾಯಕ ಸ್ಥಾನ ನೀಡಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version