ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು ಒಂದೇ ಒಂದು ದೈವ, ದೇವಸ್ಥಾನದ ದಾಖಲೆ ಸರಿಮಾಡಲಿಲ್ಲ: ಅಶೋಕ್ ರೈ

Published

on

ಪುತ್ತೂರು;ಹಿಂದುತ್ವದ ಹೆಸರಿನಲ್ಲಿ ವೋಟು ಕೇಳಿ ಅದೇ ಆಧಾರದಲ್ಲಿ ಅಧಿಕಾರಕ್ಕೆ ಬಂದವರು ಇದುವರೆಗೆ ಒಂದೇ ಒಂದು ದಐವ , ದೇವಸ್ಥಾನದ ದಾಖಲೆಗಳನ್ನು ಸರಿಮಾಡಲಿಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಆರೋಪಿಸಿದರು.ಅವರು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆ ಮತ್ತು ಅಲ್ಲಿ ಆಗಬೇಕಾದ ಕಾಮಗಾರಿಗಳನ್ನು ಪರಿಶೀಲನೆ ಮಾಡಿ ಜೀರ್ಣೋದ್ದಾರ ಕೆಲಸವನ್ನು ವೀಕ್ಷಣೆ ಮಾಡಿದರು.

ಪುತ್ತೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಬಹುತೇಕ ದೈವ, ದೇವಸ್ಥಾನದ ಜಾಗದ ದಾಖಲೆಗಳು ಸರಿಯಿಲ್ಲ. ಯಾವುದೇ ದೇವಸ್ಥಾನಕ್ಕಾಗಲಿ, ದೈವಸ್ಥಾನಕ್ಕಗಿ ಅದರದೇ ಹೆಸರಿನಲ್ಲಿ ಆರ್ ಟಿ ಸಿ ಇಲ್ಲ ಇತರೆ ಯಾವುದೇ ದಾಖಲೆಗಳು ಇಲ್ಲ. ದಾಖಲೆಗಳಿಲ್ಲ ಕಾರಣಕ್ಕೆ ಅನುದಾನವನ್ನು ಪಡೆಯಲು ಕಷ್ಟವಾಗುತ್ತಿದೆ. ಯಾವುದೇ ದೇವಸ್ಥಾನ ಅಥವಾ ದೈವಸ್ಥಾನಕ್ಕೆಸರಕಾರದಿಂದ ಅನುದಾನ ನೀಡಬೇಕಾದರೆ ದಾಖಲೆಗಳು ಅತೀ ಅಗತ್ಯವಾಗಿದೆ, ದಾಖಲೆ ಇಲ್ಲದೆ ಹೇಗೆ ಅನುದಾನವನ್ನು ನೀಡುವುದು ಎಂಬುದೇ ಅತ್ಯಂತ ಬೇಸರದ ಸಂಗತಿಯಾಗಿದೆ.ಹಿಂದುತ್ವದ ಹೆಸರಿನಲ್ಲೇ ವೋಟು ಕೇಳಿದವರು ದೇವಸ್ಥಾನದ ದಾಖಲೆ ಪತ್ರಗಳನ್ನಾದರೂ ಸರಿ ಮಾಡಬಹುದಿತ್ತು ಎಂದು ಹೇಳಿದ ಶಾಸಕರು ಪ್ರತೀ ಚುನಾವಣೆಯ ಸಂದರ್ಬದಲ್ಲಿ ಮುಗ್ದ ಜನರನ್ನು ಧರ್ಮದ ಹೆಸರಿನಲ್ಲಿ ಕೆರಳಿಸಿ ಅಧಿಕಾರಕ್ಕೇರಿದ್ದು ಮಾತ್ರ ಅವರ ಸಾಧನೆಯಾಗಿದೆ ಎಂದು ಬಿಜೆಪಿ ಹೆಸರು ಹೇಳದೆ ಪರೋಕ್ಷವಾಗಿ ಟಾಂಗ್ ನೀಡಿದರು.




ಸರಕಾರದ ಜೊತೆ ಮಾತನಾಡುತ್ತೇನೆ
ಜಿಲ್ಲೆಯ ಪ್ರತೀ ದೈವ, ದೇವಸ್ಥಾನಗಳ ದಾಖಲೆಗಳನ್ನು ಸರಿಪಡಿಸಲು ಸರಕಾರದ ಜೊತೆ ಈಗಾಗಲೇ ಮಾತುಕತೆಯನ್ನು ನಡೆಸಿದ್ದೇನೆ. ಅಧಿವೇಶನದಲ್ಲೂ ಸರಕಾರದ ಗಮನಕ್ಕೆ ತಂದಿದ್ದೇನೆ. ದಾಖಲೆ ಇಲ್ಲದ ಪ್ರತೀ ದೈವ, ದೇವಸ್ಥಾನಗಳಿಗೆ ಆರ್ ಟಿ ಸಿ ನೀಡುವಂತೆ ಕೇಳಿಕೊಂಡಿದ್ದೇನೆ. ಇದು ಜನತೆಯ ಅಥವಾ ಭಕ್ತರ ಭಾವನೆಯ ಪ್ರಶ್ನೆಯಾಗಿದೆ ಎಂದು ಹೇಳಿದ ಶಾಸಕರು ಹಿಂದುತ್ವದ ಆಧಾರದಲ್ಲಿ ವೋಟು ಕೇಳಲು ಬರುವಾಗ ಜನತೆ ಈ ಬಗ್ಗೆ ಪ್ರಶ್ನೆ ಮಾಡಬೇಕು ಎಂದು ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

Advertisement