ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಕರ್ನಾಟಕ

ಕನ್ನಡ ಉಳಿಸಿ, ಬೆಳೆಸುವ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ. “ಕನ್ನಡ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ”ಹೋರಾಟದ ಹೆಸರಿನಲ್ಲಿ ಅಸ್ತಿಪಾಸ್ತಿ ಹಾನಿ ಮಾಡುವುದನ್ನು ನಾವು ಒಪ್ಪುವುದಿಲ್ಲ, ಸಹಿಸುವುದೂ ಇಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಸಿದರು.

Published

on

ಬೆಂಗಳೂರು: ನಾವೆಲ್ಲರೂ ಕನ್ನಡ ಉಳಿಸಬೇಕು. ಕನ್ನಡಪರ ಹೋರಾಟಗಾರರ ಮೇಲೆ ನಮಗೆ ಗೌರವವಿದೆ. ಹಾಗಂತ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಇರಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅದರು ಪ್ರತಿಕ್ರಿಯಿಸಿ, “ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ಕನ್ನಡ ಉಳಿಸಿ, ಬೆಳೆಸುವ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ. ಹೋರಾಟದ ಹೆಸರಿನಲ್ಲಿ ಅಸ್ತಿಪಾಸ್ತಿ ಹಾನಿ ಮಾಡುವುದನ್ನು ನಾವು ಒಪ್ಪುವುದಿಲ್ಲ, ಸಹಿಸುವುದೂ ಇಲ್ಲ” ಎಂದರು.

“ಕಾನೂನು ಪಾಲನೆ ಎಲ್ಲರ ಕರ್ತವ್ಯ ನೀವು ಹೋರಾಟ ಮಾಡುವುದಾದರೆ ಮಾಡಿ, 60% ನಾಮಫಲಕ ಸಾಕಬೇಕು ಎನ್ನುವುದನ್ನು ಕೇಳಲು ಒಂದು ಇತಿಮಿತಿ ಇದೆ. ಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣಗೌಡರ ಮೇಲೆ ಕೇಸ್ ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದರು.

ವಂಚಿನ ಅಧಿಕಾರಿಗಳು ಒಂದು ವಾಹ ಮಾತನರೆಡ್ಡಿ, ಇದ್ದ ಮರ್ಯಾಯ ಮಾಡುಗಳು ಇಂದಿನಿಂದ ಸಾಲು, ಆದರ ಜಾಮನು ಶೃಗಶಿರಾಳ್ಳಾರು. ನಾರಾಯಣಗಣರಿಗ ಈ ಮಾತನ್ನು ಇದೇಶ ನಕುತ್ತೇಲನ, ಮುಂದಯಣ ಮಗಳುತ್ತಲು” ಮದ್ದು ಮಂದರು.”ಪ್ರತಿಭಟನೆ ಮಾಡಲಿ, ಧಿಕ್ಕಾರ ಕೂಗಲಿ ನಾವು ತಪ್ಪು ಮಾಡಿದರೆ ನಮ್ಮ ಮನೆ ಮುಂದೆಯೂ ಬಂದು ಪ್ರತಿಭಟನೆ ಮಾಡಲಿ ನಾವೂ ಕನ್ನಡಿಗರೇ. ಕನ್ನಡದ ಬಗ್ಗೆ ನಮಗೂ ಬದ್ಧತೆ ಇದೆ. ಸಚಿವ ಸಂಪುಟದಲ್ಲಿ ನಿಮ್ಮ ಟಿಪ್ಪಣಿಗಳೇನೆ ಇದ್ದರೂ ಕನ್ನಡದಲ್ಲೇ ಇರಬೇಕು ಎಂದು ಮುಖ್ಯಮಂತ್ರಿಗಳು ಸಚಿವರುಗಳಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಕನ್ನಡ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ” ಎಂದರು.

Continue Reading
Click to comment

Leave a Reply

Your email address will not be published. Required fields are marked *

Advertisement