ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಊರಿನ ಸುದ್ದಿಗಳು

ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ.ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಎಲ್ ಶೆಟ್ಟಿ ಬಿಜೆಪಿಗೆ ಸೇರ್ಪಡೆ

Published

on

ಪುತ್ತೂರು: ಖ್ಯಾತ ಉದ್ಯಮಿ, ಸಹಕಾರಿ, ಸವಣೂರು ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಎಲ್ ಶೆಟ್ಟಿ ರಾಜಕೀಯ ಪ್ರವೇಶ ಮಾಡಲಿದ್ದಾರೆ. ಜ.4ರಂದು ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬೆಳಿಗ್ಗೆ 10.30ಕ್ಕೆ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರಿ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ.

ಜ.13ರಂದು ನಡೆಯಲಿರುವ ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಯಾಗಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲಿರುವ ಅಶ್ವಿನ್ ಎಲ್ ಶೆಟ್ಟಿ, ಪ್ರಧಾನಿ ನರೇಂದ್ರ ಮೋದಿ ಅವರ ರಾಷ್ಟ್ರಪ್ರೇಮ ಮತ್ತು ಕಾರ್ಯವೈಖರಿಯನ್ನು ಮೆಚ್ಚಿ ಅಲ್ಲದೇ, ತಳಮಟ್ಟದಲ್ಲಿ ಗ್ರಾಮೀಣ ಭಾಗದ ಜನತೆ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಾರತಿಯ ಜನತಾ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದಾರೆ.


2002 ರಿಂದ 2016 ರವರೆಗೆ ಜರ್ಮನಿ, ಫ್ರಾನ್ಸ್, ಸ್ಟೈನ್, ಚೀನಾ ಮತ್ತು ಆಸ್ಟ್ರೇಲಿಯಾದಲ್ಲಿ ಏರ್ ಬಸ್ ಸಂಸ್ಥೆಯಲ್ಲಿ ಟೆಕ್ನಿಕಲ್ ಮ್ಯಾನೇಜರ್ ಆಗಿ ಉದ್ಯೋಗದಲ್ಲಿದ್ದ ಇವರು ಪ್ರಸ್ತುತ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement