ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಚರ್ಚೆಗಳು

ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ವಲಯ ಕೇಂದ್ರಕ್ಕೆ ತಲಾ 20 ಲಕ್ಷ ಹೆಚ್ಚುವರಿ ಅನುದಾನ, ಕಾರ್ಯಕರ್ತರು ಯಾವುದೇ ಸಮಸ್ಯೆ ಇದ್ದರೂ ಶಾಸಕರ ಕಚೇರಿಗೆ ಬನ್ನಿ. ಪಕ್ಷ ಕಟ್ಟುವಲ್ಲಿ ಆಗಿರುವ ಸಮಸ್ಯೆಗಳನ್ನು ನನ್ನ ಗಮನಕ್ಕೆ ತನ್ನಿ. ಶಾಸಕ ಅಶೋಕ್ ರೈ

Published

on

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ವಲಯ ಕೇಂದ್ರಕ್ಕೆ ತಲಾ 20 ಲಕ್ಷ ಅನುದಾನವನ್ನು ಹೆಚ್ಚುವರಿಯಾಗಿ ನೀಡುವುದಾಗಿ ಶಾಸಕರು ಘೋಷಿಸಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆಯಲ್ಲಿ ಅವರು ಮಾತನಾಡಿದರು.ಪ್ರತೀ ವಲಯಾಧ್ಯಕ್ಷರುಗಳ ಮೂಲಕ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯಲಿದೆ. ಗ್ರಾಮದಲ್ಲಿ ಅಗತ್ಯವಾಗಿ ಆಗಬೇಕಾದ ಕಾಮಗಾರಿಯನ್ನು ಮಾಡಲು ಈ ಅನುದಾನವನ್ನು ಬಳಕೆ ಮಾಡಲಾಗುತ್ತದೆ. ಪ್ರತಿ ಗ್ರಾಮಗಳಿಗೂ ಸಮಾನ ರೀತಿಯಲ್ಲಿ ಅನುದಾನವನ್ನು ವಿತರಣೆ ಮಾಡಲಾಗುತ್ತದೆ.

ಕಾರ್ಯಕರ್ತರು ಯಾವುದೇ ಸಮಸ್ಯೆ ಇದ್ದರೂ ಶಾಸಕರ ಕಚೇರಿಗೆ ಬನ್ನಿ. ಪಕ್ಷ ಕಟ್ಟುವಲ್ಲಿ ಆಗಿರುವ ಸಮಸ್ಯೆಗಳನ್ನು ನನ್ನ ಗಮನಕ್ಕೆ ತನ್ನಿ. ಪಕ್ಷ ಕಟ್ಟಲು ಏನು ಸಹಕಾರ ಬೇಕುಎಂಬುದನ್ನು ವೇರವಾಗಿ ತಿಳಿಸಿ, ಸರಕಾರದ ಗ್ಯಾರಂಟಿ ಯೋಜನೆಗಳು ಪ್ರತೀ ಮನೆಗೂ ತಲುಪುವಂತೆ ಕಾರ್ಯಕರ್ತರು ನೋಡಿಕೊಳ್ಳಬೇಕು. ಗೃಹಲಕ್ಷ್ಮಿ ಯಾರಿಗೆ ಬಂದಿಲ್ಲವೋ ಅಂಥವರಿಗೆ ತಲುಪಿಸುವ ವ್ಯವಸ್ಥೆಯನ್ನು ಕಾರ್ಯಕರ್ತರು ಮಾಡಬೇಕು. ವಕ್ಷದ ಬಲವರ್ಧನೆಗೆ ಗ್ಯಾರಂಟಿ ಯೋಜನೆಗಳು, ಅಕ್ರಮ ಸಕ್ರಮ, 94 ಸಿ ಮತ್ತು ಸಿ ಸಿ ವಿತರಣೆಯಲ್ಲಿ ಯಾವುದೇ ರಾಜಕೀಯ ಮಾಡಿಲ್ಲ. ಅರ್ಹ ಎಲ್ಲರಿಗೂ ಹಕ್ಕುಪತ್ರವನ್ನು ನೀಡಲಾಗಿದೆ ಎಂದು ಶಾಸಕರು ತಿಳಿಸಿದರು.ಕಾರ್ಯಕರ್ತರ ಮೂಲಕವೇ ಅಭಿವೃದ್ಧಿ ಕೆಲಸ


ಕಾರ್ಯಕರ್ತರ ಮೂಲಕವೇ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತದೆ. ವಿವಿಧ ತಂಡಗಳನ್ನುಮಾಡಿ ಎಲ್ಲಾ ಗ್ರಾಮದಲ್ಲಿ ಬೂತ್ ಮತ್ತು ಮಹಿಳಾ ತಂಡವನ್ನು ಕಡ್ಡುವ ಕೆಲಸ ಆಗಬೇಕು ಎಂದು ಹೇಳಿದ ಶಾಸಕರು ಕಾರ್ಯಕರ್ತರೇ ಪಕ್ಷದ ಆಧಾರ ಸ್ತಂಬವಾಗಿದೆ ಎಂದು ಹೇಳಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ಮಾತನಾಡಿ ಪಕ್ಷದ ಬಲವರ್ಧನೆಗೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು.ವಲಯ ಹಾಗೂ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಬಗ್ಗೆ ಮಾಹಿತಿ ನೀಡಿದರು ತಿಂಗಳಲ್ಲಿ ಎರಡು ದಿನ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕರು ಅಹವಾಲು ಸ್ವೀಕರಿಸಬೇಕು. ಕಾರ್ಯಕರ್ತರ ಭಾವನೆಗೆ ಧಕ್ಕೆತರುವ ಕೆಲನವನ್ನು ಯಾರೂ ಮಾಡಬಾರದು ಎಂದು ಹೇಳಿದರು.

ಮಾಜಿ ಅಧ್ಯಕ್ಷರಾದ ನ್ಯಾಯವಾದಿ ಫುಲ್ ರಹೀಂ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶತೂರ್ ಹಾಜಿ, ಕೆಪಿಸಿಸಿ ಸಂಯೋಜಕರಾದ ಚಂದ್ರಹಾಸ ಶೆಟ್ಟಿ, ಎಸ್ ಟಿ ಘಟಕದ ಅಧ್ಯಕ್ಷರಾದ ಮಹಾಲಿಂಗ ನಾಯ್ ಕೆಯೂರು ವಲಯ ಅಧ್ಯಕ್ಷರಾದ ಎ ಕೆ ಜಯರಾಮ ರೈ ಪುಣಾ ಮಾಜಿ ಅಧ್ಯಕ್ಷರಾದ ಪ್ರಸಾದ್ ಕೌಶಲ್ ಶೆಟ್ಟಿ.ಎಸ್ ಸಿ ಘಟಕದ ಪ್ರಮುಖರಾದ ನಗರಸಭೆಯ ಮಾಜಿ ಸದಸ್ಯ ಮುಕೇಶ್ ಕೆಮ್ಮಿಂಜೆ, ಒಳಮೊಗ್ರು ಮಸ್ಕರೇನಸ್, ಮಹಿಳಾ ಘಟಕದ ಅಧ್ಯಕ್ಷೆ ಕಾರಬಾ ಆರನ್, ಕೆದಂಬಾಡಿ ವಲಯ ಅಧ್ಯಕ್ಷ ಪುರಂದರ್ ರೈ ಕೋರಿಕ್ಕಾರ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಿದ್ದಿಕ್ ಸುಲ್ತಾನ್, ಬ್ಲಾಕ್ ಕಾರ್ಯದರ್ಶಿ ಅಮಲ ರಾಮಚಂದ್ರ, ಜಯಲಕ್ಷ್ಮಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version