ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಪ್ರತಿಷ್ಠಿತ ದ.ಕ ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷರಾಗಿ ರಾಕೇಶ್ ಮಲ್ಲಿ, ಕಾರ್ಯಧ್ಯಕ್ಷರಾಗಿ ಚಂದ್ರಹಾಸ ಶೆಟ್ಟಿ.

Published

on

ಪುತ್ತೂರು: ದ.ಕ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಅಧ್ಯಕ್ಷರಾಗಿ ರಾಕೇಶ್ ಮಲ್ಲಿ ಹಾಗೂ ಕಾರ್ಯಾಧ್ಯಕ್ಷರಾಗಿ ಎನ್. ಚಂದ್ರಹಾಸ ಶೆಟ್ಟಿರವರು ಆಯ್ಕೆಯಾಗಿದ್ದಾರೆ. ಉದ್ಯಮಿ ರಾಕೇಶ್ ಮಲ್ಲಿರವರು ಬಂಟ್ವಾಳ ತಾಲೂಕಿನವರಾಗಿದ್ದು, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ, ಅಮೆಚೂರು ಕಬಡ್ಡಿ ಅಸೋಸಿಯೇಶನ್ ನ ಕಾರ್ಯಾಧ್ಯಕ್ಷರಾಗಿ, ಕಾಂಗ್ರೆಸ್ ಕಾರ್ಮಿಕ ಘಟಕದ ಇಂಟಕ್ ರಾಜ್ಯಾಧ್ಯಕ್ಷರಾಗಿ, ರಾಷ್ಟ್ರೀಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.




ಎನ್.ಚಂದ್ರಹಾಸ ಶೆಟ್ಟಿಯವರು ಪ್ರತಿಷ್ಠಿತ ವಿಜಯಾ ಬ್ಯಾಂಕಿನ ನಿವೃತ್ತ ಅಧಿಕಾರಿಯಾಗಿದ್ದು, ಪುತ್ತೂರು ಕೋಟಿ- ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷರಾಗಿ, ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಾತ್ರವಲ್ಲ ವಿಜಯಾ ಬ್ಯಾಂಕಿನಲ್ಲಿ ಉದ್ಯೋಗದಲ್ಲಿದ್ದ ಸಂದರ್ಭದಲ್ಲಿ ಪ್ರೊ ಕಬಡ್ಡಿ ಆಟಗಾರ ಪ್ರಶಾಂತ್ ರೈ ಕೈಕಾರ ಸೇರಿದಂತೆ ಹಲವಾರು ಕಬಡ್ಡಿ ಆಟಗಾರರಿಗೆ ವಿಜಯಾ ಬ್ಯಾಂಕಿನಲ್ಲಿ ಉದ್ಯೋಗ ದೊರಕಿಸಿಕೊಡುವಲ್ಲಿ ಶ್ರಮಿಸಿರುತ್ತಾರೆ. ವೃತ್ತಿಯ ನಡುವೆ ಉದ್ಯಮಿ ಮುತ್ತಪ್ಪ ರೈ ನೇತೃತ್ವದ ಪುತ್ತೂರಿನ ಕೋಟಿ ಚಿನ್ನಯ ಕಂಬಳದ ಮುಂದಾಳತ್ವ ವಹಿಸಿಕೊಂಡು ಅದರ ಯಶಸ್ಸಿಗಾಗಿ ಈಗಲೂ ಶ್ರಮಿಸುತ್ತಾ ಬಂದಿರುತ್ತಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement