ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
6 months agoon
By
Akkare Newsಬಂಟ್ವಾಳ, ಜ.11: ನಾಲ್ವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ತಾಯಿ, ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂಪಾಯಿ ನಗ- ನಗದನ್ನು ದರೋಡೆಗೈದ ಘಟನೆ ಬೆಳ್ಳಂಬೆಳಗ್ಗೆ ವಗ್ಗದಲ್ಲಿ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಫ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಫ್ಲೋರಿನ್ ಪಿಂಟೊ ಮತ್ತು ಅವರ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದರು.
ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ತಿಳಿದಿದ್ದವರೇ ರಾಬರಿ ನಡೆಸಿದ್ದಾರೆ. ಕಪಾಟಿನಲ್ಲಿರಿಸಿದ್ದ ಸುಮಾರು ಅಂದಾಜು ರೂ 3,20,000/-ಮೌಲ್ಯದ ಒಟ್ಟು 82 ಗ್ರಾಂ ತೂಕದ ವಿವಿಧ ಮಾದರಿಯ ಚಿನ್ನಾಭರಣಗಳನ್ನು, ರೂ 11,000/- ಮೌಲ್ಯದ 2 ಮೊಬೈಲ್ ಫೋನ್ ಗಳನ್ನು ಸುಲಿಗೆ, 30 ಸಾವಿರ ರೂ. ನಗದು ಹಾಗೂ ಒಟ್ಟು ಮೂರುವರೆ ಲಕ್ಷಕ್ಕೂ ಅಧಿಕ ಮೌಲ್ಯದ ನಗ- ನಗದು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬೆಳಗ್ಗೆ ಸುಮಾರು 6.30ರ ವೇಳೆಗೆ ಕಾಲಿಂಗ್ ಬೆಲ್ ಹಾಕಿದ್ದು ಬಾಗಿಲು ತೆಗದ ಕೂಡಲೇ ನಾಲ್ವರು ಮುಸುಕುಧಾರಿಗಳು ಮನೆಯೊಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿರುವ ಚಿನ್ನ, ನಗದು ತೆಗೆದು ಕೊಡುವಂತೆ ಬೆದರಿಸಿದ್ದಾರೆ.
ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದ್ದು ಕಪಾಟು ಬೀಗದ ಕೀ ಪಡೆದಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮಗಳು ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಇವರ ಅಣ್ಣ ಆಸ್ಟಿನ್ ಪಿಂಟೋ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆ ಇದೇ ಪರಿಸರದಲ್ಲಿ ಅಂಗಡಿಯಿಂದ ಜ್ಯೂಸ್ ಮೆಷಿನ್ ಒಂದನ್ನು ಕಳವು ಮಾಡಲಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ. ಹರೀಶ್ ಭೇಟಿ ನೀಡಿದ್ದಾರೆ. ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.