ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ 12 ರಲ್ಲಿ 12 ಸ್ಥಾನ ದಲ್ಲಿ ಭರ್ಜರಿ ಜಯಭೇರಿ ಬಾರಿಸಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ

Published

on

ಸವಣೂರು: ಪ್ರತಿಷ್ಠಿತ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಹಕಾರ ಭಾರತಿ ಪಾಲಾಗಿದೆ. ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಸಹಕಾರ ಭಾರತಿ ಬಹುಮತದಿಂದ ಆಯ್ಕೆಯಾಗಿದೆ.ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆ ಪ್ರಕ್ರಿಯೆ ಶನಿವಾರ ನಡೆಯಿತು.ಒಟ್ಟು 12 ಸ್ಥಾನಗಳ ಪೈಕಿ ಈಗಾಗಲೇ ಒಂದು ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದ್ದು ಸಾಲಗಾರರಲ್ಲದ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಪ್ರಕಾಶ್ ರೈ ಸಾರಕರೆ ಓರ್ವರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದ 11 ಸ್ಥಾನಗಳಿಗೆ ಚುನಾವಣೆ ನಡೆದು ಎಲ್ಲಾ 12 ಸ್ಥಾನಗಳು ಸಹಕಾರರ ಭಾರತಿ ಪಾಲಾಗಿದೆ.


ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಸಾಮಾನ್ಯ ಕ್ಷೇತ್ರದಿಂದ ಅಶ್ವಿನ್ ಎಲ್. ಶೆಟ್ಟಿ, ಗಣೇಶ್ ನಿಡ್ವಣ್ಣಾಯ, ತಾರನಾಥ ಕಾಯರ್ಗ, ಉದಯ ರೈ, ಶಿವಪ್ರಸಾದ್ ಎಂ.ಎನ್., ಹಿಂದುಳಿದ ವರ್ಗ ಎ ಯಿಂದ ಚೇತನ್ ಕೆ., ಅನುಸೂಚಿತ ಜಾತಿಯಿಂದ ತಿಮ್ಮಪ್ಪ, ಹಿಂದುಳಿದ ವರ್ಗ ಬಿ ಯಿಂದ ಚೆನ್ನಪ್ಪ ಗೌಡ ನೂಜಿ, ಪರಿಶಿಷ್ಟ ಪಂಗಡದಿಂದ ಗಂಗಾಧರ ಪೆರಿಯಡ್ಕ ಮಹಿಳಾ ಕ್ಷೇತ್ರದಿಂದ ಜ್ಞಾನೇಶ್ವರಿ, ಸೀತಾಲಕ್ಷ್ಮೀ ಗೆಲುವು ಸಾಧಿಸಿದ್ದಾರೆ.ಶೋಭಾ ಎನ್.ಎಸ್. ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಪಿ. ಹಾಗೂ ಸಿಬ್ಬಂದಿಗಳು ಸಹಕರಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement