ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಕಬಕ: ವಿದ್ಯಾಪುರ ಅಂಗನವಾಡಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಪ್ರತೀ ಗ್ರಾಮಗಳ ಅಭಿವೃದ್ದಿಗೆ ಅನುದಾನ ಹಂಚಿಕೆ: ಶಾಸಕ ಅಶೋಕ್ ರೈ

Published

on

ಪುತ್ತೂರು: ಸರಕಾರದಿಂದ ಬರುವ ಅನುದಾನವನ್ನು ಸಮಪ್ರಮಾಣದಲ್ಲಿ ಎಲ್ಲಾ ಗ್ರಾಮಗಳಿಗೂ ಹಂಚಿಕೆ ಮಾಡುವ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿ ಮಾಡಲಾಗುವುದು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.


ಅವರು ಕಬಕ ವಿದ್ಯಾಪುರ ಅಂಗನವಾಡಿಗೆ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಶಿಥಿಲಾವಸ್ಥೆಯಲ್ಲಿದ್ದ ಈ ಅಂಗನವಾಡಿ ಕಟ್ಟಡಕ್ಕೆ ಅನುದಾನ ನೀಡುವಂತೆ ಸ್ಥಳೀಯರು ಮನವಿ ಮಾಡಿದ್ದರು. ರೂ. ೧೩ ಲಕ್ಷ ವೆಚ್ಚದಲ್ಲಿ ಹೊಸ ಕಟ್ಟಡ ಮೂರು ತಿಂಗಳೊಳಗೆ ಕಾಮಗಾರಿ ಪೂರ್ಣವಾಗಲಿದೆ. ಕಾಮಗಾರಿಯ ಗುಣಮಟ್ಗಟ ಚೆನ್ನಾಗಿರುವಂತೆ ಗ್ರಾಮಸ್ಥರು ಎಚ್ಚರವಹಿಸಬೇಕು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನತೆ ನೆಮ್ಮದಿಯಿಂದ ಇದ್ದಾರೆ. ಐದು ಗ್ಯಾರಂಟಿ ಯೋಜನೆಗಳು ಮನೆ ಮನೆಯನ್ನು ಬೆಳಗಿಸಿದೆ ಎಂದು ಹೇಳಿದರು.


ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅದ್ಯಕ್ಷರಾದ ಡಾ. ರಾಜಾರಾಂ ಮಾತನಾಡಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ವ್ಯಾಪ್ತಿಯ ಗ್ರಾಮಗಳಿಗೆ ಹೆಚ್ಚಿನ ಅನುದಾನವನ್ನು ಶಾಸಕರು ನೀಡಿದ್ದಾರೆ. ಹತ್ತು ಹಲವು ವರ್ಷಗಳ ಬೇಡಿಕೆಗಳು ಒಂದೊಂದಾಗಿ ಈಡೇರುತ್ತಿದೆ. ಅಭಿವೃದ್ದಿಯಲ್ಲಿ ರಾಜಕೀಯ ಮಾಡದ ಶಾಸಕರನ್ನು ಅಭಿನಂದನೆ ಮಾಡುವುದಾಗಿ ಹೇಳಿದರು. ಕಬಕ ಗ್ರಾಪಂ ಸದಸ್ಯ ಸಾಬಾ ರವರು ಮಾತನಾಡಿ ವಿದ್ಯಾಪುರ ಅಂಗನವಾಡಿಯಲ್ಲಿ ೩೫ ಮಕ್ಕಳಿದ್ದಾರೆ. ಇಲ್ಲಿಗೆ ಹೊಸ ಕಟ್ಟಡ ಕೊಡಿ ಎಂದು ಹಲವು ವರ್ಷಗಳಿಂದ ಮನವಿ ಮಾಡುತ್ತಿದ್ದೇವೆ ಆದರೆ ಈ ಬಾರಿ ಯೋಗ ಕೂಡಿ ಬಂದಿದೆ ಎಂದು ಹೇಳಿದರು.ಕಬಕ ಗ್ರಾಪಂ ಸದಸ್ಯರುಗಳಾದ ಸಾಬ ಕಬಕವಲಯ ಅಧ್ಯಕ್ಷ ದಾಮೋದರ್ ಕಬಕ, ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ಮೋಹನ್ ಗುರ್ಜಿನಡ್ಕ ,ಮೌಲಾ ಕಬಕ ಮೊದಲಾದವರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement