ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಬೆಂಗಳೂರು ಸಿಸಿಬಿ ಪೊಲೀಸರಿಂದ ವಿಚಾರಣೆ. ಕರ್ನಾಟಕ ರಾಜ್ಯದಲ್ಲಿ ಯಾವ ಸರಕಾರ ಇದೆ ಎಂದು ನನಗೆ ಗೊತ್ತಿಲ್ಲ. ಕೋಮುವಾದ ಭಾಷಣ ಮಾಡಿದ ಅನಂತ್ ಕುಮಾರ್ ಹೆಗಡೆ. ಕಲ್ಲಡ್ಕ ಭಟ್. ಬಂಧಿಸದ ಸರಕಾರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ. ಹಿಂದುಳಿದ ನಾಯಕ ಬಿ.ಕೆ ಹರಿಪ್ರಸಾದ್

Published

on

ಬೆಂಗಳೂರು: ಇದು ಕಾಂಗ್ರೆಸ್ ಸರ್ಕಾರವೇ ಅಥವಾ ಬೇರೆ ಪಕ್ಷದ ಸರ್ಕಾರವೇ ಎಂದು ಸಿಸಿಬಿ ವಿಚಾರಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಂಎಲ್ ಸಿ ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.ಶುಕ್ರವಾರ ಸಿಸಿಬಿ ಪೊಲೀಸರು ಬಿಕೆ ಹರಿಪ್ರಸಾದ್ ಅವರನ್ನು ವಿಚಾರಣೆ ನಡೆಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ. ಬೇಕಿದ್ದರೆ ಮಂಪರು ಪರೀಕ್ಷೆ ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ಸ್ಟೇಷನ್ಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಿ. ನನ್ನ ಜತೆಗೆ ವಿಜಯೇಂದ್ರ ಅವರನ್ನು ಕೂಡ ಮಂಪರು ಪರೀಕ್ಷೆಗೆ ಒಳಪಡಿಸಲಿ. ನನ್ನ ಪರಿಸ್ಥಿತಿಯೇ ಹೀಗಾದರೆ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.





ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಯಾವುದೇ ಕ್ರಮ ಆಗಿಲ್ಲ. ನಾನು ಇವರ ಬೆದರಿಕೆಗಳಿಗೆಲ್ಲ ಜಗ್ಗಲ್ಲ. ಅಂದು ಕೊಟ್ಟ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ರಾಮ ಮಂದಿರಕ್ಕೆ ಹೋಗುವವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಹರಿಪ್ರಸಾದ್ ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

Advertisement