ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ದ.ಕ ಉಸ್ತುವಾರಿ ಸಚಿವರ ಜನತಾದರ್ಶನ ಕಾರ್ಯಕ್ರಮದಲ್ಲಿ ಜನರ ಸ್ಪಂದನೆಗೆ ಸ್ಪಂದಿಸಿದ ಶಾಸಕ ಅಶೋಕ್ ಕುಮಾರ್ ರೈ

Published

on

ಪುತ್ತೂರು: ಸುಳ್ಯದ ಕಿವಿಜಿ ಪುರಭವನದಲ್ಲಿ ಇಂದು ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿ ಸಚಿವರ ಬಳಿ ತಮ್ಮ ಅಹವಾಲನ್ನು ಸಲ್ಲಿಸಿದರು. ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭಗೊಂಡಿತ್ತು.ಕೆಲವು ಸಮಸ್ಯೆಗಳಿಗೆ ಸಚಿವರು ಸ್ಥಳದಲ್ಲೇ ಪರಿಹಾರವನ್ನು ಸೂಚಿಸಿದರು. ಇಜಾ ಮಟ್ಟದ ಎಲ್ಲಾ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.





ಸುಳ್ಯದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈ ಭಾಗವಹಿಸಿದರು. ಶಾಸಕರು ಸಭೆಗೆ ಆಗಮಿಸುತ್ತಿದ್ದಂತೆಯೇ ಹಲವುಮಂದಿ ನಾಗರಿಕರು ಶಾಸಕರ ಬಳಿಯೂ ತಮ್ಮ ಅಹವಾಲನ್ನು ಸಲ್ಲಿಸಿದರು. ಜನತಾ ದರ್ಶನಕ್ಕೆ ಬಂದ ಬಹುತೇಕ ಮಂದಿ ಸಚಿವರ ಬಳಿ ಅಹವಾಲು ಸಲ್ಲಿಸಿ ಬಳಿಕ ಪುತ್ತೂರು ಶಾಸಕರಲ್ಲಿಯೂ ತಮ್ಮ ಅಹವಾಲಿನ ಬಗ್ಗೆ ವಿವರಣೆಯನ್ನು ನೀಡಿದರು. ಪುತ್ತೂರು ಶಾಸಕರು ಬಡವರ ಪರ ಎಂಬುವುದು ಸುಳ್ಯದಲ್ಲಿಯೂ ಸಾಕ್ಷಿಯಾಯಿತು.

Continue Reading
Click to comment

Leave a Reply

Your email address will not be published. Required fields are marked *

Advertisement