ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈPublished
2 years agoon
By
Akkare News
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ಹೆಸರು ಮುನ್ನಲೆಗೆ ಬಂದಿದೆ. ಹಿಂದುತ್ವದ ಭದ್ರಕೋಟೆಯಲ್ಲಿ ಯುಟಿ ಖಾದರ್ಗೆ ಟಿಕೆಟ್ ನೀಡಲು ಕೆಪಿಸಿಸಿ (KPCC) ಯಲ್ಲಿ ಭಾರೀ ಚರ್ಚೆ ನಡೆದಿದೆ ಎನ್ನಲಾಗಿದೆ.
ಮುಸ್ಲಿಂ ಮತಗಳನ್ನು ಯುಟಿ ಖಾದರ್ ಅವರು ಪಡೆದುಕೊಳ್ಳುವ ಹೆಚ್ಚಿನ ಚಾನ್ಸಸ್ ಜೊತೆಗೆ ಹಿಂದೂ ಮತಗಳನ್ನು ಪಡೆಯುವ ಸಾಮರ್ಥ್ಯ ಇರುವುದರಿಂದ ಈ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಭೂತ ಕೋಲದಲ್ಲಿ ಭಾಗವಹಿಸುವಿಕೆ, ಹಿಂದೂಗಳ ಸಮಾರಂಭಗಳಲ್ಲಿ ಭಾಗವಹಿಸುವಿಕೆ ಹೀಗೆ ಖಾದರ್ ಅವರು ಕ್ಷೇತ್ರದ ಹಿಂದುಗಳ ಮನ ಗೆದ್ದಿರುವುದು ಇವೆಲ್ಲಾ ಗಮನಾರ್ಹ.
ಖಾದರ್ ಅವರ ಜಾತ್ಯತೀತ ನಡೆಯಿಂದ ಎಲ್ಲಾ ರೀತಿಯ ಓಟ್ ಬ್ಯಾಂಕ್ ಸಿಗುವ ದೊಡ್ಡ ಪ್ಲಸ್ ಪಾಯಿಂಟ್ ಇರುವುದರಿಂದ ಜೊತೆಗೆ ಉತ್ತಮವಾಗಿ ಕೆಲಸ ಮಾಡಿದ್ದು, ಜನಾಭಿಪ್ರಾಯವು ಒಳ್ಳೆಯದಿರುವುದರಿಂದ ಕರಾವಳಿ ಪ್ರದೇಶದಲ್ಲಿ ಮತ್ತೆ ತಮ್ಮ ಪ್ರಾಬಲ್ಯ ಹೆಚ್ಚಿಸಲು, ಹಿಡಿತ ಸಾಧಿಸಲು ಕಾಂಗ್ರೆಸ್ ಲೆಕ್ಕಾಚಾರ ಹಾಕಿದೆ ಎನ್ನಲಗಿದೆ.