ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
5 months agoon
By
Akkare Newsವಿಟ್ಲ: ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯ ಲಾಕರ್ ಬ್ರೇಕ್ ಪ್ರಕರಣವೊಂದು ಇತ್ತೀಚೆಗೆ ನಡೆದಿತ್ತು. ಪೊಲೀಸರು ಈ ಕಳ್ಳತನದ ಪ್ರಕರಣದ ಸುಳಿವು ಸಿಗದೇ ಹರಸಾಹಸ ಪಡುತ್ತಿದ್ದು, ಇದೀಗ ಕೇರಳಕ್ಕೆ ಎರಡು ತನಿಖಾ ತಂಡ ತೆರಳಿದ್ದು, ಬ್ಯಾಂಕ್ ದರೋಡೆ ಮಾಡಿದ ಕಳ್ಳರಿಗಾಗಿ ಹುಡುಕಾಟ ನಡೆಸುತ್ತಿದೆ.
ಮೂಲಗಳಿಂದ ಸ್ಥಳೀಯ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ವರದಿಯಾಗಿದೆ. ಇದೀಗ ಅವರು ನೀಡಿದ ಮಾಹಿತಿಯನ್ನು ಆಧರಿಸಿ ಪೊಲೀಸರ ತಂಡ ಕೇರಳಕ್ಕೆ ತೆರಳಿದೆ ಎನ್ನಲಾಗಿದೆ.
ಇನ್ನು ಪೊಲೀಸ್ ವಶದಲ್ಲಿರುವವರು ಈ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದಾರೆಯೇ? ಅಥವಾ ಪರೋಕ್ಷವಾಗಿ ಭಾಗಿಯಾಗಿದ್ದಾರೆಯೇ ಎಂಬುವುದು ಇನ್ನೂ ಖಚಿತ ಗೊಂಡಿಲ್ಲ. ಬ್ಯಾಂಕ್ ಹಾಗೂ ಪೊಲೀಸ್ ಇಲಾಖೆ ಈ ಬ್ಯಾಂಕ್ ಲಾಕರ್ನಂತಹ ಗಂಭೀರ ಪ್ರಕರಣದ ಕುರಿತು ಯಾವುದೇ ಮಾಹಿತಿಯನ್ನು ಇಲ್ಲಿಯವರೆಗೆ ಬಹಿರಂಗ ಪಡಿಸಿಲ್ಲ.
ಶುಕ್ರವಾರ ಬೆಳಿಗ್ಗೆ ಕಳ್ಳತನವಾದ ಕೃತ್ಯ ಬೆಳಕಿಗೆ ಬಂದಿದೆ. ಅದರ ನಂತರ ಬೆರಳಚಚು ತಜ್ಞರು ಬಂದು ಸಾಕ್ಷ್ಯ ಸಂಗ್ರಹಿಸಿ, ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ನಂತರ ಸಂಜೆ ಹೊತ್ತಿಗೆ ಕಳ್ಳರು ಹಾನಿ ಮಾಡಿದ ಸ್ಟ್ರಾಂಗ್ ಹಾಗೂ ಸೇಫ್ ಲಾಕರ್ ಬೀರನ್ನು ಸ್ಥಳಾಂತರ ಮಾಡುವ ಕೆಲಸ ರಾತ್ರಿಯವರೆಗೆ ನಡೆದಿದೆ. ಈ ಸಂದರ್ಭದಲ್ಲಿ ಹಾನಿಯಾದ ಲಾಕರ್ಗೆ ಬಟ್ಟೆ ಮುಚ್ಚಿ ರಾತ್ರೋರಾತ್ರಿ ಸ್ಥಳಾಂತರ ಮಾಡಲಾಗಿದೆ.
ಇವುಗಳನ್ನು ಮುಂದೆ ನ್ಯಾಯಾಲಯದಲ್ಲಿ ಸಾಕ್ಷಿಯಾಗಿ ಸಲ್ಲಿಸುವ ಸಾಧ್ಯತೆ ಇದೆ. ಕಳೆದ ಒಂದು ತಿಂಗಳಿನಿಂದ ಪರಿಸರದಲ್ಲಿ ಅನುಮಾನಸ್ಪದವಾಗಿ ಓಡಾಟ ನಡೆಸಿದವರ ಮಾಹಿತಿ ಕಲೆ ಹಾಕುವ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದರೆ.