ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಊರಿನ ಸುದ್ದಿಗಳು

ಪುತ್ತೂರು ಯುವ ಒಕ್ಕಲಿಗ ಗೌಡ ಸಂಘದ ಕ್ರೀಡಾ ಸಂಭ್ರಮ 2024 ಕ್ರೀಡೋತ್ಸವಕ್ಕೆ ಚಾಲನೆ

Published

on

ಪುತ್ತೂರು: ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯದ ಅತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ‘ಯುವ ಕ್ರೀಡಾ ಸಂಭ್ರಮ-2024’ದ ಕ್ರೀಡಾಜ್ಯೋತಿ ವಾಹನ ಜಾಥಾಕ್ಕೆ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಚಾಲನೆ ನೀಡಲಾಯಿತು.






ಪ್ರಗತಿಪರ ಕೃಷಿಕೆ ಯಶೋಧ ಮೋನಪ್ಪ ಗೌಡ ತೆಂಗಿನಕಾಯಿ ಒಡೆಯುವ ಮೂಲಕ ಕ್ರೀಡಾಜ್ಯೋತಿ ವಾಹನ ಜಾಥಾಕ್ಕೆ ಚಾಲನೆ ನೀಡಿದರು. ಚಾಲನೆ ನೀಡಿದರು. ಬಳಿಕ ಕ್ರೀಡಾಜ್ಯೋತಿಯನ್ನು ಕ್ರೀಡಾ ಸಂಭ್ರಮ ನಡೆಯುವ ತೆಂಕಿಲ ವಿವೇಕಾನಂದ ಶಾಲಾ ಕ್ರೀಡಾಂಗಣಕ್ಕೆ ತರಲಾಯಿತು.ಈ ಸಂದರ್ಭದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಿದಾನಂದ ಬೈಲಾಡಿ, ಸ್ವಸಹಸಾಯ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎ.ವಿ.ನಾರಾಯಣ, ನಗರಸಭೆ ಮಾಜಿ ಸದಸ್ಯ ವಿಶ್ವನಾಥ ಗೌಡ ಬನ್ನೂರು, ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಉಪಾಧ್ಯಕ್ಷ ಯತೀಂದ್ರ ಕೊಚ್ಚಿ, ಪ್ರಗತಿಪರ ಕೃಷಿಕ ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಲೋಕೇಶ್ ಚಾಕೋಟೆ, ಸಂಪತ್ ಕುಮಾರ್ ಪಾಂಗ್ಲಾಯಿ, ಮೋಹನ ಗೌಡ ಬನ್ನೂರು, ನಾಗರಾಜ ಗೌಡ ತೆಂಕಪ್ಪಾಡಿ, ಪ್ರಶಾಂತ್ ಕೆಮ್ಮಾಯಿ, ನಗರಸಭೆ ಸದಸ್ಯೆ ಪೂರ್ಣಿಮಾ ಚೆನ್ನಪ್ಪ ಗೌಡ, ಕ್ರೀಡಾಪಟುಗಳು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement