ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಪುತ್ತೂರು ತಾಲೂಕು ಯುವ ಬಂಟರ ಸಂಘಕ್ಕೆ ನೂತನ ಪದಾಧಿಕಾರಿಗಳ ನೇಮಕ • ಅಧ್ಯಕ್ಷರಾಗಿ ಡಾ. ಹರ್ಷಕುಮಾ‌ರ್ ರೈ ಮಾಡಾವು ಆಯ್ಕೆ

Published

on

ಪುತ್ತೂರು: ತಾಲೂಕು ಯುವ ಬಂಟರ ಸಂಘದ ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಡಾ. ಹರ್ಷಕುಮಾರ್ ರೈ ಮಾಡಾವು, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿನಿ ಶೆಟ್ಟಿ ಹಾಗೂ ಪ್ರಜ್ವಲ್ ರೈ ಸೊರಕೆ ಆಯ್ಕೆಗೊಂಡಿದ್ದಾರೆ.

ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಆಯ್ಕೆ ಮಾಡಲಾಗಿದ್ದು, ಸಂಘದ ಸಲಹೆಗಾರ ಚುನಾವಣಾಧಿಕಾರಿ ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಅವರ ನೇತೃತ್ವದಲ್ಲಿ ಮಾಡಲಾಯಿತು.ಖಜಾಂಚಿಯಾಗಿ ಶಿವ ಶ್ರೀರಂಜನ್ ರೈ ದೇರ್ಲ, ಜೊತೆ ಕಾರ್ಯದರ್ಶಿಯಾಗಿ ಶುಭಾ ರೈ, ಸಂಘಟನಾ ಸಂಚಾಲಕರಾಗಿ ಸಂದೇಶ್ ರೈ ಡಿ., ಧಾರ್ಮಿಕ ಸಂಚಾಲಕರಾಗಿ ಮನ್ಮಥ ಶೆಟ್ಟಿ, ಉಪಾಧ್ಯಕ್ಷರುಗಳಾಗಿ ನಿಹಾಲ್ ಪಿ ಶೆಟ್ಟಿ. ಸತೀಶ್ ಎನ್ ಶೆಟ್ಟಿ. ಜಿ. ಕೆ. ಕಾರ್ತಿಕ್ ರೈ ಅವರನ್ನು ಆಯ್ಕೆ ಮಾಡಲಾಯಿತು.





ಉಳಿದಂತೆ ನೆಟ್ಟಣಿಗೆ, ಮುದ್ದೂರು, ಕಡಬ, ಬೆಳಂದೂರು, ನೆಲ್ಯಾಡಿ ವಲಯಕ್ಕೆ ಹಾಗೂ 9 ಮಂದಿ ಸಂಘಟನಾ ಕಾರ್ಯದರ್ಶಿಗಳು, 9 ಮಂದಿ ಸಹಕಾರ್ಯದರ್ಶಿಗಳು (ಮಹಿಳೆಯರಿಗೆ ಮಾತ್ರ), ಹಾಗೂ 9 ಮಂದಿ ಸಂಚಾಲಕರನ್ನು ಹೊಸ ಸಮಿತಿ ಸಭೆಯಲ್ಲಿ ವಲಯವಾರು ಪ್ರಾತಿನಿಧ್ಯದನ್ವಯ ನೇಮಕ ಮಾಡಬೇಕಾಗಿದ್ದು, ಅದನ್ನು ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷರು ಮುಂದಿನ ದಿನಗಳಲ್ಲಿ ಮಾಡಲಿದ್ದಾರೆ.

ತಾಲೂಕು ಯುವ ಬಂಟರ ಸಂಘದ ನೂತನ ಅಧ್ಯಕ್ಷ, ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ತಾಲೂಕು ಬಂಟರ ಸೇವಾ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಗೊಟ್ಟು ಸಹಿತ ಸಂಘದ ಹಿರಿಯರು ನೂತನ ಪದಾಧಿಕಾರಿಗಳನ್ನು ಹೂ ಗುಚ್ಚ ನೀಡಿ ಗೌರವಿಸಿದರು.ಈ ಸಂದರ್ಭ ಬಂಟರ ಮಾತೃ ಸಂಘದ ಸಹಸಂಚಾಲಕ ಜಯಪ್ರಕಾಶ್ ರೈ, ತಾಲೂಕು ಬಂಟರ ಸಂಘದ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ, ತಾಲೂಕು ಬಂಟರ ಸಂಘದ ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ, ಮಹಿಳಾ ಸಂಘದ ಮಾಜಿ ಕೋಶಾಧಿಕಾರಿ ವತ್ಸಲಾ ಪಿ ಶೆಟ್ಟಿ, ಗೌತಮ್ ರೈ ಸಾಂತ್ಯ, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಯುವ ಬಂಟರ ಸಂಘದ ಸಂಚಾಲಕ ರವಿಪ್ರಸಾದ್ ಶೆಟ್ಟಿ, ರವಿಚಂದ್ರ ರೈ ಕುಂಬ್ರ, ಭಾಸ್ಕ‌ರ್ ರೈ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version