ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ 20 ಸ್ಥಾನ ಗೆದ್ದೇ ಗೆಲ್ಲುತ್ತದೆ :ಡಿಕೆ ಶಿವಕುಮಾರ್

Published

on

ಮಂಗಳೂರು: ಮುಂದಿನ ಲೋಕನಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ 20 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಅಡ್ಯಾರ್‌ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಮಟ್ಟದ ಸಮಾವೇಶದಲ್ಲಿ ಪ್ರಾಸ್ತಾವಿಕ ಮಾತನಾಡಿದ ಅವರು, ಮಂಗಳೂರು ಹೋರಾಟದ ಭೂಮಿ, ಸಾಮಾಜಿಕ, ಆರ್ಥಿಕ, ರಾಜಕೀಯ, ಧಾರ್ಮಿಕವಾಗಿ ಎಲ್ಲದಕ್ಕೂ ಹೋರಾಟ ಮಾಡಿರುವ ಮಣ್ಣು. ಹಾಗಾಗಿ ನಮ್ಮ ಹೋರಾಟವನ್ನು ಮಂಗಳೂರಿನಿಂದಲೇ ಆರಂಭಿಸಲಾಗಿದೆ. ಮಂಗಳೂರು, ಉಡುಪಿಯ ಜನ ಆತ್ಮವಿಶ್ವಾಸ ಕಳೆದುಕೊಳ್ಳಬಾರದು. ನಮ್ಮ ಸಿದ್ಧಾಂತ, ನಂಬಿಕೆ, ತತ್ವ ಆದರ್ಶ ನೀತಿಗಳ ಮೇಲೆ ನಂಬಿಕೆ ಇಟ್ಟು ಒಗ್ಗಟ್ಟಾಗಿ ದುಡಿಯುವುದು ಮುಖ್ಯ ಎಂದರು.


ಪ್ರಧಾನಿ ನರೇಂದ್ರ ಮೋದಿಯವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ 370 ಸೀಟುಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಹೇಳುತ್ತಿದ್ದಾರೆ. ನಮ್ಮ ಯೋಜನೆ, ಯೋಚನೆ ರಾಜ್ಯದ ಜನರಿಗೆ ಮನದಟ್ಟು ಮಾಡಿದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ ಎಂದು ಭವಿಷ್ಯ ನುಡಿದರು.


ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷ ಆಯ್ಕೆಮಾಡುವ ಅಭ್ಯರ್ಥಿಗಳನ್ನು ಒಗ್ಗಟ್ಟಾಗಿ ಪರಿಶ್ರಮ ಪಟ್ಟು ಆತ್ಮವಿಶ್ವಾಸದೊಂದಿಗೆ ಕೆಲಸ ಮಾಡಬೇಕೆಂದು ಕಾರ್ಯಕರ್ತರಿಗೆ ಸೂಚನೆ ನೀಡಿದ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ 20ಸೀಟುಗಳನ್ನು ಗೆಲ್ಲುತ್ತದೆ ಎಂದು ಆತ್ಮ ವಿಶ್ವಾಸ ವ್ಯಕ್ತಪಡಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement