ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಸರಕಾರದ ಗ್ಯಾರಂಟಿ ಯೋಜನೆಯಿಂದಾಗಿ ಜನರಿಗೆ ಶಕ್ತಿ ತುಂಬಿದೆ :, ಪದ್ಮರಾಜ್ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ

Published

on

ಬೆಳ್ತಂಗಡಿ . ಫೆ:23.ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಪೆರಾಡಿ ಮಾರೋಡಿ ಮತ್ತು ಸಾವ್ಯ ಗ್ರಾಮಸ್ಥರ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಯ ಫಲಾನುಭವಿಗಳ “ಕುಟುಂಬ ಸಮ್ಮಿಲನ” ಪೆರಾಡಿ ಮಾವಿನಕಟ್ಟೆಯಲ್ಲಿ ನಡೆಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಕ್ಷಿತ್ ಶಿವರಾಂ ಸಭೆಯನ್ನು ಉದ್ದೇಶಿಸಿ ಸರಕಾರದ ಗ್ಯಾರಂಟಿ ಯೋಜನೆಯ ಬಗ್ಗೆ ಸಮರ್ಪಕವಾದ ಮಾಹಿತಿಯನ್ನು ನೀಡಿದರು ಕುಟುಂಬ ಸಮ್ಮಿಲನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪದ್ಮರಾಜ್ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮೊದಲು ಜನರಿಗೆ ನೀಡಿದಂತ ಆಶ್ವಾಸನೆಯನ್ನು ಈಡೇರಿಸಿದೆ ಪ್ರತಿ ಮನೆಗೆ ಉಚಿತ ವಿದ್ಯುತ್ ನೀಡುವ ಮುಖಾಂತರ ಶಕ್ತಿಯನ್ನು ಕೊಟ್ಟ ಪಕ್ಷ ಕಾಂಗ್ರೆಸ್.








ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಸ್ವಾವಲಂಬಿನೆ ಬದುಕು ನೀಡಿದ ಪಕ್ಷ ಕಾಂಗ್ರೆಸ್ .ಎಲ್ಲಾ ವರ್ಗದವರನ್ನು ಎಲ್ಲಾ ಜಾತಿಯವರನ್ನು ಸಮಾನವಾಗಿ ನೋಡುವುದರ ಮುಖಾಂತರ ಜಾತ್ಯತೀತ ನಿಲುವನ್ನ ನೀಡಿದ ಪಕ್ಷ ಕಾಂಗ್ರೆಸ್. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದವನ್ನು ಮಾಡುವುದರ ಮುಖಾಂತರ ಗ್ಯಾರಂಟಿ ಯೋಜನೆಗೆ ಶಕ್ತಿಯನ್ನು ನೀಡಬೇಕೆಂದು ಮನವಿ ಮಾಡಿದರು ಇದೇ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಮಾಹಿತಿ ತಿದ್ದುಪಡಿ ಕಾರ್ಯಗಾರ ಮತ್ತು ಉಚಿತ ಯೋಜನೆಯ ಬಗ್ಗೆ ಸಲಹೆ ಸೂಚನೆಯನ್ನ ನೀಡಲಾಯಿತು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version