ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಧರ್ಮಸ್ಥಳದಿಂದ ರೂ.10ಲಕ್ಷ ದೇಣಿಗೆ, ಮಹಾಲಿಂಗೇಶ್ವರ ದೇವರ ಅನ್ನಚತ್ರದ ಅಭಿವೃದ್ಧಿ ಕಾರ್ಯಗಳಿಗೆ ಮಂಜೂರು.Published
2 years agoon
By
Akkare News
ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವಿರೇಂದ್ರ ಹೆಗ್ಗಡೆಯವರು ಪುತ್ತೂರು ಶ್ರೀ ಮಾಹಾಲಿಂಗೇಶ್ವರ ದೇವರ ಅನ್ನಚತ್ರದ ಅಭಿವೃದ್ಧಿ ಕಾರ್ಯಗಳಿಗೆ ಮಂಜೂರು ಮಾಡಿದ ರೂ10.00 ಲಕ್ಷದ ಡಿ.ಡಿಯನ್ನು ಮಾ.1ರಂದು ಶಾಸಕ ಅಶೋಕ್ ಕುಮಾರ್ ರೈ ಮತ್ತು ದೇವಸ್ಥಾನದ ಆಡಳಿತ ಅಧಿಕಾರಿ ಹನುಮ ರೆಡ್ಡಿ ಅವರಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ತಾಲೂಕು ಅಧ್ಯಕ್ಷ ಲೋಕೇಶ್ ಹೆಗ್ಡೆ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ನಗರ ಸಭಾ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಜನಜಾಗೃತಿ ಮಾಜಿ ಅಧ್ಯಕ್ಷರು ಮಹಾಬಲ ರೈ ವಳತ್ತಡ್ಕ ಪುತ್ತೂರು ವಲಯ ಅಧ್ಯಕ್ಷರು ಸತೀಶ್ ನಾಯ್ಕ ಜಿಲ್ಲಾ ನಿರ್ದೇಶಕರು ಪ್ರವೀಣ್ ಕುಮಾರ್, ನಾರಾಯಣ ಭಟ್ ಮೇಲ್ವಿಚಾರಕಿ ಶೃತಿ ಒಕ್ಕೂಟದ ಅಧ್ಯಕ್ಷರುಗಳು, ಸೇವಾ ಪ್ರತಿನಿಧಿಗಳು ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.