ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಮಾ.7 ರಿಂದ ದ.ಕ. ಜಿಲ್ಲಾದ್ಯಂತ ಗ್ಯಾರಂಟಿ ಫಲಾನುಭವಿಗಳ ಸಮಾವೇಶ – ಸಚಿವ ದಿನೇಶ್ ಗುಂಡೂರಾವ್

Published

on

ಮಂಗಳೂರು : ದ.ಕ. ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ರಾಜ್ಯ ಸರಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವು ಮಾರ್ಚ್ 7ರಿಂದ ನಡೆಯಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ದ.ಕ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಸರಕಾರವು ಅನುಷ್ಠಾನಕ್ಕೆ ತಂದಿರುವ ವಿವಿಧ ಗ್ಯಾರಂಟಿ ಯೋಜನೆಗಳು ದೇಶದಲ್ಲಿ ಅಭೂತಪೂರ್ವ ಯೋಜನೆ ಯಾಗಿದೆ. ಯಾರೂ ನಿರೀಕ್ಷಿಸಿರದ ವೇಗದಲ್ಲಿ ಜಾರಿಗೆ ಬಂದು ದೊಡ್ಡ ಪ್ರಮಾಣದಲ್ಲಿ ಜನತೆಗೆ ಲಾಭ ಸಿಕ್ಕಿದೆ. ಜನತೆಯ ಈ ನೆಮ್ಮದಿ ಮತ್ತು ತೃಪ್ತಿಯನ್ನು ಅಭಿವ್ಯಕ್ತಗೊಳಿಸಲು ಈ ಸಮಾವೇಶ ಆಯೋಜಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.






ಮಾ.7ರಂದು ಪುತ್ತೂರು, ಮುಲ್ಕಿ, ಮಂಗಳೂರು ತಾಲೂಕು, ಮಾ.9ರಂದು ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ ತಾಲೂಕು, ಮಾ. 10 ಸುಳ್ಯ, ಕಡಬ, ಮೂಡುಬಿದಿರೆ ತಾಲೂಕುಗಳಲ್ಲಿ ಸಮಾವೇಶ ನಡೆಯಲಿದೆ ಎಂದು ಸಚಿವರು ಹೇಳಿದರು.ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹೊಸದಾಗಿ ನೋಂದಣಿ ಮಾಡಲು ಕೌಂಟರನ್ನು ಸಮಾವೇಶದಲ್ಲಿ ತೆರೆಯಲಾಗುವುದು, ಅಲ್ಲದೆ ಈಗಾಗಲೇ ಯೋಜನೆಯ ಲಾಭ ಪಡೆಯುತ್ತಿರುವ ಫಲಾನುಭವಿಗಳ ಕುಂದುಕೊರತೆ ಪರಿಹರಿಸಲು ಪ್ರತ್ಯೇಕ ಕೇಂದ್ರವನ್ನು ಸಮಾವೇಶ ಸ್ಥಳದಲ್ಲಿ ತೆರೆಯಲಾಗುವುದು ಎಂದು ಅವರು ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

Advertisement