Connect with us

ಇಂದಿನ ಕಾರ್ಯಕ್ರಮ

ಸಾಹಿತ್ಯಕವಾಗಿ ಪುತ್ತೂರು ಒಂದು ಸಾಹಿತ್ಯಕಾಶಿ : ಪುತ್ತೂರು ಉಮೇಶ್‌ ನಾಯಕ್

Published

on

ಪುತ್ತೂರು: ಸಾಹಿತ್ಯಕವಾಗಿ ಬಹಳ ಸಮೃದ್ಧ ಮತ್ತು ಫಲ ಭರಿತವಾದ ಕ್ಷೇತ್ರ ಪುತ್ತೂರು. ಇದಕ್ಕೆ ಬಹಳ ಹಿಂದಿನ ಒಂದು ಸಾಕ್ಷಿ ಅಥವಾ ಎಲ್ಲರೂ ತಿಳಿದಿರುವಂತಹ ಹಾಗೂ ನೋಡಿರುವಂತಹ ಹಿರಿಯ ಸಾಹಿತಿಗಳು ಇಲ್ಲಿ ಮಾಡಿರುವಂತಹ ಕೃಷಿ ಇದಕ್ಕೆ ಪೂರಕವಾದ ಅಂಶವಾಗಿದೆ. ಅನೇಕ ಸಾಹಿತಿಗಳು ಇಲ್ಲಿಗೆ ಬಂದು ಸಾಹಿತ್ಯ ಕೃಷಿಯನ್ನು ಮಾಡಿ ಪ್ರಶಸ್ತಿಯನ್ನು ಪಡೆದು ಪುತ್ತೂರಿಗೆ ಗೌರವವನ್ನು ತಂದಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕಿನ ಅಧ್ಯಕ್ಷ ಉಮೇಶ್ ನಾಯಕ್‌ ಹೇಳಿದರು.
A
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಕರ್ನಾಟಕ ಸಂಘ, ಪುತ್ತೂರು ಕನ್ನಡ ವಿಭಾಗ, ವಿವೇಕಾನಂದ ಕಾಲೇಜು (ಸಾಯತ್ತ) ಪುತ್ತೂರು ಇದರ ಸಹಯೋಗದಲ್ಲಿ ನಡೆದ ನೆನಪಾಗಿ ಉಳಿದವರು ಕೃತಿ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದರು. ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ, ಬದಲಾಗುತ್ತಿರುವ ಈ ವ್ಯವಸ್ಥೆಯಲ್ಲಿ ಹಿಂದೆ ಅನುಭವಿಸಿ ಬರೆದಂತಹ ಕವಿಗಳು ಅಥವಾ ಅನುಭವಿಸಿ ಬರೆಯದೆ ಇದ್ದಂತಹ ವ್ಯಕ್ತಿಗಳು ಅವರ ಕುರಿತಾಗಿ ಬಹುಷ: ಅನೇಕ ರೀತಿಯದಾಸಲೀಕರಣದ ಸಾಧ್ಯತೆ ಇದೆ ಹಾಗೂ ಅಗತ್ಯವೂ ಇದೆ. ಬದುಕುವ ಈ ಅವಧಿಯಲ್ಲಿ ಅನೇಕ ಬದಲಾವಣೆಗಳು ನಡೆಯುತ್ತಿವೆ ಅದು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಕವಾಗಿಯೇ ಬದಲಾವಣೆಗಳು ಆಗುತ್ತಿವೆ ಎಂದು ಹೇಳಿದರು.






ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು ಹಾಗೂ ಬೆಂಗಳೂರು ಕುವೆಂಪು ಭಾಷಾಭಾರತಿಯ ಮಾಜಿ ಅಧ್ಯಕ್ಷ ಡಾ. ಗಿರೀಶ್ ಭಟ್ ಅಜಕ್ಕಳ ಕೃತಿ ಲೋಕಾರ್ಪಣೆ ಮಾಡಿದರು. ಪರೀಕ್ಷಾಂಗ ಕುಲಸಚಿವ ಡಾ. ಶ್ರೀಧರ ಎಚ್. ಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಬಿ. ಪುರಂದರ ಭಟ್, ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಶರ್ಮ ಪ್ರಾರ್ಥಿಸಿದರು. ಉಪನ್ಯಾಸಕಿ ಡಾ. ಮೈತ್ರಿ ಭಟ್ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Continue Reading
Click to comment

Leave a Reply

Your email address will not be published. Required fields are marked *

Advertisement