ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಲೋಕಸಭಾ ಚುನಾವಣೆ : ಬಿಜೆಪಿ ಸಂಸದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಸಂಪರ್ಕದಲ್ಲಿ. ಕಾಂಗ್ರೆಸ್ ಸೇರಲು ಮುಕ್ತ ಆಹ್ವಾನ ನೀಡಿದ :ಡಿ.ಕೆ.ಶಿವಕುಮಾರ್

Published

on

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿರುವ ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರು ಟಿಕೆಟ್‌ಗಾಗಿ ಕಸರತ್ತು ನಡೆಸಿದ್ದಾರೆ. ಆದರೆ ಬಿಜೆಪಿ ವರಿಷ್ಠರು ಸದಾನಂದ ಗೌಡರಿಗೆ ಟಿಕೆಟ್‌ ನೀಡುತ್ತಾರೆಯೇ ಎಂಬ ಅನುಮಾನ ಕೂಡಾ ಇದೆ. ಈ ಮಧ್ಯೆ ಹೊಸ ವಿಷಯ ಏನಪ್ಪಾ ಅಂದರೆ ಸದಾನಂದ ಗೌಡ ಅವರು ಕಾಂಗ್ರೆಸ್‌ ಸೇರಲಿದ್ದಾರೆ ಎನ್ನುವುದು.






ಡಿಸಿಎಂ ಡಿಕೆ ಶಿವಕುಮಾರ್‌ ಅವರು ಮಾಜಿ ಸಿ ಎಂ ಡಿ.ವಿ.ಸದಾನಂದ ಗೌಡ ಅವರ ಬಗ್ಗೆ ಅಚ್ಚರಿಯ ಹೇಳಿಕೆಯನ್ನು ನೀಡಿದ್ದು, ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಹಲವು ಬಿಜೆಪಿ ನಾಯಕರು ನಮ್ಮನ್ನು ಭೇಟಿಯಾಗಿದ್ದಾರೆ. ಇದರಲ್ಲಿ ಮೂವರು ಬಿಜೆಪಿ ಸಂಸದರು ಅದರಲ್ಲೂ ಮಾಜಿ ಸಿಎಂ ಒಬ್ಬರೂ ನಮ್ಮಲ್ಲಿ ಇದ್ದಾರೆ ಎಂದು ಹೇಳಿದ್ದಾರೆ.

ಹೆಸರನ್ನು ಬಹಿರಂಗಪಡಿಸಿದ ಉಪ ಮುಖ್ಯಮಂತ್ರಿ ಡಿಕೆಶಿ ಅವರು ಮಾಜಿ ಸಿಎಂ ಸದಾನಂದ ಗೌಡ ಕಾಂಗ್ರೆಸ್‌ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿದ್ದಾರೆ.ಕಾಂಗ್ರೆಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾರ್ಚ್‌ 15 ಕ್ಕೆ ಬಿಡುಗಡೆಯಾಗಲಿದೆ. ಇದು ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಸಭೆ ಬಳಿಕ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂಬುವುದಾಗಿ ಹೇಳಿದರು.

Continue Reading
Click to comment

Leave a Reply

Your email address will not be published. Required fields are marked *

Advertisement