ಅಂತರರಾಷ್ಟ್ರೀಯ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ ; 30 31 ರಂದು ಶಾಸಕ ಅಶೋಕ್ ಕುಮಾರ್ ರೈ ಸಾರಥ್ಯದಲ್ಲಿ ವಿಜಯ - ವಿಕ್ರಮ ಕಂಬಳ ಆಹಾರ ಮೇಳ .ಕೃಷಿ ಮೇಳ.ವಿವಿಧ ಖಾದ್ಯಗಳು. ಸಾಂಸ್ಕೃತಿಕ ಕಾರ್ಯಕ್ರಮಅಂತರರಾಷ್ಟ್ರೀಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ: ವಿಶ್ವ ಮಹಿಳಾ ದಿನಾಚರಣೆ ಆಚರಣೆ , ಮಕ್ಕಳಿಗೆ ಜೀವನ ಶಿಕ್ಷಣ ನೀಡಿ - ಸಂಸ್ಕಾರ ಕಲಿಸುವಲ್ಲಿ ಮಹಿಳೆಯ ಪಾತ್ರವೂ ಪುರುಷರಷ್ಟೇ ಪ್ರಧಾನ ; ಪ್ರೊಫೆಸರ್ ಶ್ರೀಮತಿ ತ್ರಿಶಲಾ ಜೈನ್ ಕೆ.ಎಸ್ಅಂತರರಾಷ್ಟ್ರೀಯ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸ್ಥಳೀಯ
ವಿಟ್ಲ ಪೊಲೀಸ್ ಠಾಣೆ ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ರಿಂದ ಮೂವರು ಅಂತರಾಜ್ಯ ಕಳ್ಳರ ಬಂಧನಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸಲು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಶಾಖೆಗಳನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೋಮವಾರ ಬ್ಯಾಂಕುಗಳಿಗೆ ಕರೆಅಂತರರಾಷ್ಟ್ರೀಯ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಉದ್ಯೋಗ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಅನಿವಾಸಿ ಭಾರತೀಯರಿಗೆ ಜೀವನ ಭದ್ರತೆಯ ಜೊತೆಗೆ ಮತದಾನದ ಅವಕಾಶವನ್ನೂ ಕಲ್ಪಿಸಿ ಅಧಿವೇಶನದಲ್ಲಿ ಅನಿವಾಸಿ ಭಾರತೀಯರ ಪರ ವಾದಮಂಡಿಸಿದ ಶಾಸಕ ಅಶೋಕ್ ರೈಅಂತರರಾಷ್ಟ್ರೀಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ
ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಯಲ್ಲಿ ಬೋಚಸನ್ಯಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಹೆಸರಿನಲ್ಲಿ ನಿರ್ಮಿಸಲಾದ ಅತಿದೊಡ್ಡ ಹಿಂದೂ ದೇವಾಲಯ ಮೋದಿಯವರಿಂದ ಉದ್ಘಾಟನಾ ಸಮಾರಂಭಅಂತರರಾಷ್ಟ್ರೀಯ ಅಭಿನಂದನೆ ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾನೂನು ಕಾರ್ಯಕ್ರಮಗಳು ಕ್ರೀಡೆ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಉಪ್ಪಿನಂಗಡಿ : ವಿಜಯ-ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತPublished
2 years agoon
By
Akkare News
ಪುತ್ತೂರು: 38ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ ಕಂಬಳ ಉಬರ್ ಕಂಬಳ ಉತ್ಸವ ಮಾ. 30ರಂದು ಬೆಳಗ್ಗೆ 10.31ಕ್ಕೆ ಕೂಟೇಲು ನದಿ ಕಿನಾರೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಉದ್ಘಾಟಿಸಲಿದ್ದಾರೆ ಎಂದು ಶಾಸಕ, ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಶೋಕ್ ರೈ, ಈ ಬಾರಿ 3 ದಿನ ಕಂಬಳ ಕೂಟ ಜರಗಲಿದೆ ಎಂದರು.

ಕಂಬಳ ಪ್ರಾರಂಭದ ಹಿಂದಿನ ದಿನ ಮಾ.29ರಂದು ಜನಾರ್ಕಷಣೆಯ ಜಲ ಕ್ರೀಡೆ, ಸಾಂಸ್ಕೃತಿಕ, ಕೃಷಿ ಮೇಳ, ಸಸ್ಯ ಮೇಳ ಜರುಗಲಿದೆ ಎಂದರು. ನೇತ್ರಾವತಿ ನದಿ ತಟದಲ್ಲಿ ಜರಗುವ ಉಪ್ಪಿನಂಗಡಿ ಕಂಬಳ ಕೂಟದಲ್ಲಿ ಮೊದಲ ಬಾರಿ ಜಲಕ್ರೀಡೆ ಹಾಗೂ ನದಿಗೆ ವಿದ್ಯುತ್ ದೀಪಾಲಂಕ ನಡೆಯಲಿದೆ ಎಂದು ಅಶೋಕ್ ರೈ ತಿಳಿಸಿದರು.
ಮಾ. 30ರಂದು ಬೆಳಿಗ್ಗೆ 8.30ಕ್ಕೆ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದಿಂದ ಹೊರಡುವ ಮೆರವಣಿಗೆಗೆ ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಚಾಲನೆ ನೀಡಲಿರುವರು. ಕಂಬಳದ ಸಭಾ ಕಾರ್ಯಕ್ರಮ ಸಂಜೆ 6ರಿಂದ ನಡೆಯಲಿದ್ದು, ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿರುವರು. ಸಭಾಪತಿ ಯು. ಟಿ. ಖಾದರ್, ಯೋಜನಾ ಸಬಲೀಕರಣ ಕ್ರೀಡಾ ಹಾಗೂ ಪರಿಶಿಷ್ಟ ವರ್ಗಗಳ ಸಚಿವ ನಾಗೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಬೆಂಗಳೂರು ಉದ್ಯಮಿ ಬಾಬುರಾಜ್, ಸಂಗೀತ ನಿರ್ದೇಶಕ ಗುರುಕಿರಣ್, ನಾಡೋಜ ಡಾ| ಬಿ. ಶಂಕರ್, ಅಧ್ಯಕ್ಷರು ಶ್ಯಾಮಿಲಿ ಫ್ಯಾಮಿಲಿ ಟ್ರಸ್ಟ್ ರಿ., ಸಹಕಾರ ರತ್ನ ಎಂ. ಎನ್. ರಾಜೇಂದ್ರ ಕುಮಾರ್ ಮೊದಲಾದವರು ಮುಖ್ಯ ಅತಿಥಿಗಳಾಗಿರುವರು.
ಕಂಬಳಕ್ಕೆ ಆರು ವಿಭಾಗಗಳ ಕೋಣಗಳು ಭಾಗವಹಿಸಲಿದ್ದು, ಕನೆಹಲಗೆ, ಅಡ್ಡಹಲಗೆ, ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ ವಿಭಾಗದ ಸ್ಪರ್ಧೆಗಳಿದ್ದು ಹಿರಿಯ ವಿಭಾಗದ ಪ್ರಥಮ ವಿಜೇತ ಕೋಣಗಳಿಗೆ 1/½ ಪವನ್ ಚಿನ್ನ. ದ್ವಿತೀಯ ವಿಜೇತ ಕೋಣಗಳಿಗೆ 1 ಪವನ್ ಚಿನ್ನ (8 ಗ್ರಾಂ) ಬಹುಮಾನ ಹಾಗೂ ಕಿರಿಯ ವಿಭಾಗಕ್ಕೆ ಪ್ರಥಮ ½ ಪವನ್ ಹಾಗೂ ದ್ವಿತೀಯ ½ ಪವನ್ ಚಿನ್ನದ ಬಹುಮಾನ ವಿಜೇತ ಕೋಣಗಳ ಓಟಗಾರರಿಗೂ ಪ್ರೋತ್ಸಾಹಕ ಬಹುಮಾನವಿದೆ. ಅಲ್ಲದೆ ವಿಜೇತ ಕೋಣಗಳ ಮಾಲಕರಿಗೆ ಚಿನ್ನದೊಂದಿಗೆ ವಿಶೇಷ ಕೋಟಿ ಚೆನ್ನಯ ಟ್ರೋಫಿ ನೀಡಲಾಗುವುದು. ಭಾಗವಹಿಸುವ ಕೋಣಗಳಿಗೆ ಸುಸಜ್ಜಿತ ಬ್ಯಾಂಕ್ನೊಂದಿಗೆ ನೀರಿನ ವ್ಯವಸ್ಥೆ ಮಾಡಿರುತ್ತೇವೆ.







ಅಲ್ಲದೇ ಹೊನಲು ಬೆಳಕಿನ ವ್ಯವಸ್ಥೆ, ಸುಸಜ್ಜಿತ ಪ್ರೇಕ್ಷಕರ ಚಪ್ಪರ, ವೀಕ್ಷಕ ಮಹಿಳೆಯರಿಗೆ ಪ್ರತ್ಯೇಕ ಗ್ಯಾಲರಿ, ಆಕರ್ಷಕ ವೇದಿಕೆ, ಮನಮೆಚ್ಚುವ ವೀಕ್ಷಕ ವಿವರಣೆ, ಉತ್ತಮ ಕರೆ ನಿರ್ಮಾಣ. ಕರೆಗೆ ಶುದ್ಧ ನೀರಿನ ವ್ಯವಸ್ಥೆ, ಸುಸಜ್ಜಿತ ಸ್ವಾಲ್ಗಳು, ಕೋಣಗಳ ಯಜಮಾನರಿಗೆ ಪ್ರತ್ಯೇಕ ಚಪ್ಪರದ ವ್ಯವಸ್ಥೆ ವರ್ಷಕ್ಕೊಂದು ಹೊಸತನದ ಸೇರ್ಪಡೆಯೊಂದಿಗೆ ಕಂಬಳ ಕ್ಷೇತ್ರದಲ್ಲೇ ಶ್ರೇಷ್ಠ ಕಂಬಳ ಎಂಬ ಹೆಸರನ್ನು ಪಡೆದಿದೆ ಎಂದರು.ಉಬಾರ್ ಕಂಬಳಕ್ಕೆ ಲಕ್ಷಾಂತರ ಮಂದಿ ಪ್ರೇಕ್ಷಕರೂ ಹಲವಾರು ವಿದೇಶಿಯರು ಭಾಗವಹಿಸುತ್ತಿರುವುದು ಕಂಬಳಕ್ಕೆ ಪ್ರತಿಷ್ಠೆ ಎನಿಸಿದೆ. ಈ ವರ್ಷ ಸುಮಾರು 160 ಜೋಡಿ ಓಟದ ಕೋಣಗಳು ಭಾಗವಹಿಸುವ ನಿರೀಕ್ಷೆ ಇದ್ದು ಅನೇಕ ಗಣ್ಯಾತಿಗಣ್ಯರು. ಖ್ಯಾತ ಚಲನ ಚಿತ್ರ ನಟ- ನಟಿಯರು ಮತ್ತು ಅನೇಕ ಮಾಧ್ಯಮದ ಮಿತ್ರರು. ಟಿ.ವಿ. ಮಾಧ್ಯಮದವರೂ ಭಾಗವಹಿಸಲಿದ್ದಾರೆ. ಅಲ್ಲದೆ ಸಸ್ಯಮೇಳ, ಆಹಾರಮೇಳ, ಕೃಷಿ ಯಂತ್ರೋಪಕರಣ ಮೇಳ ಹಾಗೂ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದರು.
ಈ ಬಾರಿ ಉಬಾರ್ ಕಂಬಳ ಉತ್ಸವವನ್ನು ಆಯೋಜಿಸಲಾಗಿದೆ. ಸಾಂಸ್ಕತಿಕ ಕಾರ್ಯಕ್ರಮ, ಸ್ವಾದಿಷ್ಟ ಆಹಾರ ಮೇಳ, ಬೋಟಿಂಗ್ ರೈಡ್, ಕೃಷಿ ಮೇಳ, ವ್ಯವಹಾರ ಮೇಳ, ಮಕ್ಕಳ ಮನೋರಂಜನಾ ಆಟಗಳನ್ನು ಮಾ. 29, 30, 31ರಂದು ಕಂಬಳ ಕರೆಯ ಬಳಿಯಲ್ಲೇ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು. ಕಂಬಳ ಸಮಿತಿ ಪ್ರಮುಖರಾದ ಉಮೇಶ್ ಶೆಣೈ, ನಿರಂಜನ್ ರೈ ಮಠಂತಬೆಟ್ಟು, ಮಹಮ್ಮದ್ ಬಡಗನ್ನೂರು, ಉಬಾರ್ ಕಂಬಳ ಉತ್ಸವದ ಸೈಫ್, ರಾಜೇಶ್ ಉಪಸ್ಥಿತರಿದ್ದರು.