ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್

Published

on

ಪುತ್ತೂರು ಮಾ, 22:ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಪುತ್ತೂರು ವಿಧಾನ ಸಭಾ ಕ್ಷೇತ್ರ ದ ನೂತನ ಅಧ್ಯಕ್ಷ ರಾಗಿ ಎಡ್ವರ್ಡ್ ರವರನ್ನು ಆಯ್ಕೆ ಮಾಡಲಾಯಿತು.ಜಿಲ್ಲಾ ಉಸ್ತುವಾರಿ ಝಕೀರ್ ಹುಸೈನ್ ಮತ್ತು ಭರತ್ ರಾಮ್ ರವರು ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ಪುತ್ತೂರಿನ ಸರಕಾರಿ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ಎಡ್ವರ್ಡ್, NSUI ವಿದ್ಯಾರ್ಥಿ ಸಂಘಟನೆಯಲ್ಲಿ 6 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಂಘಟನೆ ಮಾಡುವಲ್ಲಿ ಇವರ ಛಲ ಗುರುತಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.








ಪುತ್ತೂರಿನ ವಿವಿದೆಡೆ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಎದುರಾದಾಗ ಮುಂದೆ ಬಂದು ಈ ಬಗ್ಗೆ KSRTC ಪ್ರಮುಖರ ಜೊತೆ ಮಾತನಾಡಿ, ಹೆಚ್ಚುವರಿ ಬಸ್ ಗಳಿಗಾಗಿ ಕೊನೆವರೆಗೂ ಹೋರಾಟ ನಡೆಸಿದ ಕೀರ್ತಿ ಇವರಿಗಿದೆ. ಹಲವು ವಿದ್ಯಾರ್ಥಿಗಳಿಗೆ ವಿವಿಧ ರೀತಿಯಲ್ಲಿ ಸಮಸ್ಯೆಗಳು ಎದುರಾದಾಗ ಅವರ ಪರ ನಿಂತು ನ್ಯಾಯ ಒದಗಿಸುವಲ್ಲಿ ಯಶಸ್ವಿಯಾದ ಎಡ್ವರ್ಡ್ ರವರು ಪುತ್ತೂರಿನ ಅಧ್ಯಕ್ಷರಾಗಿರುವುದು NSUI ಕಾರ್ಯಕರ್ತರಲ್ಲಿ ಸಂತಸ ಮೂಡಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement