ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
2 years agoon
By
Akkare News
ವಿಟ್ಲ ಸೈಂಟ್ ರೀಟಾ ವಿದ್ಯಾಸಂಸ್ಥೆಯ ಐದನೇ ತರಗತಿಯ ವಿದ್ಯಾರ್ಥಿ ಇಬ್ರಾಹಿಂ ರಿಷಾನ್ ನಿಗೆ ವಿಟ್ಲ ಶಾಲಾ ರಸ್ತೆಯಲ್ಲಿ ಮೂರುಸಾವಿರ ರೂಪಾಯಿ ಬಿದ್ದು ಸಿಕ್ಕಿತು. ಆತ ಮೊಬಲಗನ್ನು ಸೋದರ ರಿಯಾನ್ ಮತ್ತು ಗೆಳೆಯ ಸುಜಾನ್ ಗೆ ತೋರಿಸಿದನು. ಅವರೆಲ್ಲರೂ ಒಟ್ಟಾಗಿ ಪಕ್ಕದ ಆರಾಧನಾ ಮುದ್ರಣಾಲಯದ ಮಾಲಕ ವಿಜಯರಿಗೆ ಸಿಕ್ಕಿದ ಮೊಬಲಗನ್ನು ನೀಡುತ್ತಾ “ರಸ್ತೆಯಲ್ಲಿ ಬಿದ್ದು ಸಿಕ್ಕಿತು, ಯಾರದ್ದೆಂದು ತಿಳಿಯದು” ಎಂದು ಪ್ರಾಮಾಣಿಕವಾಗಿ ಹೇಳಿದರು.

ವಿಜಯರು ಪಕ್ಕದಲ್ಲಿರುವ ಸರಸ್ವತಿ ಸಹಕಾರಿ ಬ್ಯಾಂಕ್ ಶಾಖೆಯ ಸಿ.ಸಿ.ಟಿ.ವಿಯ ಫೂಟೇಜ್ ಮೂಲಕ ನೋಡಿದಾಗ ಮುತ್ತುರಾಜ್ ಎಂಬವರ ಜೇಬಿನಿಂದ ಹಣ ಬೀಳುತ್ತಿರುವುದನ್ನು ಗಮನಿಸಿದರು. ಮುತ್ತುರಾಜರನ್ನು ಕರೆಸಿ ಹಣ ಹಸ್ತಾಂತರಿಸಿದರು.
ಈ ಘಟನೆಯು ಬಂಟ್ವಾಳ ತಾಲೂಕು ಮಕ್ಕಳ ಕಲಾಲೋಕದ ಗಮನಕ್ಕೆ ಬರಲಾಗಿ ತಕ್ಷಣ ಕಾರ್ಯ ಪ್ರವೃತ್ತರಾದರು. ಹಣ ಹಿಂತಿರುಗಿಸಲು ಕಾರಣರಾದ ವಿದ್ಯಾರ್ಥಿಗಳನ್ನು ಮತ್ತು ಶಾಲೆಯನ್ನು ಗುರುತಿಸಿ ಪ್ರಾಂಶುಪಾಲ ಫಾದರ್ ಸುನಿಲ್ ಪ್ರವೀಣ್ ಪಿಂಟೋ ಇವರನ್ನು ಸಂರ್ಕಿಸಿದರು.







ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿಗಳು ಮತ್ತು ಉತ್ತಮವಾಗಿ ಸ್ಪಂದಿಸಿದ ವಿಜಯ್ ಇವರಿಗೆ ಶಾಲಾ ಎಸ್ಸೆಂಬ್ಲಿಯಲ್ಲಿ ಮುತ್ತುರಾಜ್ ಇವರ ಸಹಕಾರದೊಂದಿಗೆ ಪುಸ್ತಕ ಸ್ಮರಣಿಕೆ ಮತ್ತು ಸಿಹಿ ತಿಂಡಿ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಒಳ್ಳೆಯತನ ಮತ್ತು ಪ್ರಾಮಾಣಿಕತೆಯನ್ನು ಪ್ರಾಂಶುಪಾಲರು ಮನ ತುಂಬಿ ಹರಸಿದರು.
ಸ್ವಸ್ಥ ಸಮಾಜಕ್ಕಾಗಿ, “ಸಾಮಾಜಿಕ ಸ್ವಚ್ಛತಾ ಆಂದೋಲನ”ವನ್ನು ಅಲ್ಲಲ್ಲಿ ಸಂಘಟಿಸುತ್ತಿರುವ ಬಂಟ್ವಾಳ ತಾಲೂಕು ಮಕ್ಕಳ ಕಲಾಲೋಕವು ಜನರಲ್ಲಿರುವ ಜೀವನ ಮೌಲ್ಯಗಳು ಸಮಾಜಕ್ಕೆ ಆದರ್ಶವಾದುವುಗಳು.