ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

Published

on

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳಿಗೆ ನಿರ್ಬಂಧಿಸುವಂತೆ ಬೆಂಗಳೂರು ನಗರ ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳಲ್ಲಿ ಒಟ್ಟು 2656 ಪೋಲಿಂಗ್ ಬೂತ್ ಒಳಪಡುವ ಸುಮಾರು 28-30 ಲಕ್ಷ ಜನ ಮತದಾರರು ಇರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವು ಹಿಂದೂ- ಮುಸ್ಲಿಂ-ಕ್ರೈಸ್ತರು ಎಂಬ ಬೇಧ-ಭಾವವಿಲ್ಲದೆ, ಜಾತಿ-ಮತ-ಪಂಥಗಳನ್ನು ಮೀರಿ, ಯಾವುದೇ ಪ್ರಚೋದನಕಾರಿ ಭಾಷಣಗಳಿಗೆ ಪ್ರೇರೆಪಿತರಾಗದೇ ಶಾಂತಿ-ಸೌಹರ್ದತೆಯಿಂದ ಬದುಕುತ್ತಿದ್ದು, ಇಂತಹ ಶಾಂತಿ ಸೌಹಾರ್ದತೆಯ ಬೀಡು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದಿಂದ ಪ್ರಚೋದನಕಾರಿ ಭಾಷಣಗಳನ್ನು ಮಾಡುವ ಶೋಭಾ ಕರಾಂದ್ಲಾಜೆ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜನರಲ್ಲಿ ಆತಂಕ ಬಹಳಷ್ಟು ಮೂಡಿಸಿದೆ.







ಅವರ ರಾಜಕೀಯ ಇತಿಹಾಸದುದ್ದಕ್ಕೂ ಶಾಂತಿ-ಸೌಹಾರ್ದತೆ ಕದಡುವಂತಹ ಕೋಮುಗಲಭೆಗೆ ಪ್ರಚೋದಿಸುವಂತಹ ಭಾಷಣಗಳನ್ನೇ ಮಾಡುತ್ತಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಯಾವುದೇ ಕಾರಣಕ್ಕೂ ಚುನಾವಣಾ ಪ್ರಚಾರದಲ್ಲಿ ಭಾಷಣಕ್ಕೆ ಅವಕಾಶ ನೀಡದೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಾದ್ಯಂತ ಇಂತಹ ದುರ್ಘಟನೆಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ ಶೋಭಾ ಕರಂದ್ಲಾಜೆ ಅವರ ಚುನಾವಣಾ ಭಾಷಣಗಳಿಗೆ ಅನುಮತಿ ನೀಡದೆ ನಿರ್ಬಂಧಿಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ

Continue Reading
Click to comment

Leave a Reply

Your email address will not be published. Required fields are marked *

Advertisement