ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಬೆಂಗಳೂರು ಗ್ರಾಮಾಂತರದಲ್ಲಿ ಮಂಜುನಾಥ್​ ಹೆಸರಿನ ಮತ್ತೋರ್ವ ವ್ಯಕ್ತಿ ಸ್ಪರ್ಧೆ

Published

on

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಖ್ಯಾತ ವೈದ್ಯ, ಡಾ. ಸಿಎನ್ ಮಂಜುನಾಥ್ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ವಿರುದ್ದ ಚುನಾವಣಾ ಕಣಕ್ಕೆಳಿದಿದ್ದಾರೆ.

ಮೂಲತಃ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಚೊಳೇನಹಳ್ಳಿ ಗ್ರಾಮದ ಡಾ.ಸಿ.ಎನ್. ಮಂಜುನಾಥ್ ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಅವರ ತಾಲ್ಲೂಕಿನವರೇ ಆದ ಅದೇ ಅದೇ ಹೆಸರಿನ ವ್ಯಕ್ತಿಯೊಬ್ಬರು ಕಣಕ್ಕಿಳಿಯೊದಾಗಿ ಘೋಷಣೆ ಮಾಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.ಮಂಜುನಾಥ್ ಅವರಿಗೆ ಸ್ಪರ್ಧೆ ಒಡ್ಡಲು ಅದೇ ಹೆಸರಿನ ಗೌರವ ಡಾಕ್ಟರೇಟ್ ಮೂಲಕ ತಮ್ಮ ಹೆಸರಿನ ಮುಂದೆ ಡಾಕ್ಟರ್ ಹೊಂದಿರುವ ಡಾ.ಸಿ.ಎನ್.ಮಂಜುನಾಥ್ ಎಂಬುವವರು ಬಹುಜನ ಭಾರತ್ ಪಾರ್ಟಿಯಿಂದ ಸ್ಪರ್ಧಿಸಲು ನಿರ್ಧರಿಸಿರೊದಾಗಿ ಘೋಷಣೆ ಮಾಡಿದ್ದು ತೀವೃ ಕುತೂಹಲ ಮೂಡಿಸಿದೆ.







ಅಚ್ಚರಿಯ ಸಂಗತಿಯೆಂದರೆ ಒಂದೇ ಹೆಸರು ಹೊಂದಿರುವ ಇಬ್ಬರು ಮಂಜುನಾಥ್​ ಅವರುಗಳ ತಂದೆಯ ಹೆಸರೂ ಒಂದೇ ಆಗಿದ್ದು, ಒಂದೇ ಜಿಲ್ಲೆ, ಒಂದೇ ತಾಲ್ಲೂಕಿನವರಾಗಿರೋದು ಕೂಡ ಪರಿಣಾಮ ಬೀರಬಹುದೇ ಎನ್ನೋ ಚರ್ಚೆ ಹುಟ್ಟು ಹಾಕಿದೆ. ಇಬ್ಬರಲ್ಲಿ ಒಬ್ಬರು ವೃತ್ತಿಯಿಂದ ವೈದ್ಯರು, ಮತ್ತೊಬ್ಬರು ಸಮಾಜ ಸೇವೆಗೆ ಗೌರವ ಡಾಕ್ಟರೇಟ್ ಪಡೆದಿರುವವರು ಎಂಬುದಷ್ಟೇ‌ ವ್ಯತ್ಯಾಸವಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement