ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
3 months agoon
By
Akkare Newsಪುತ್ತೂರು: ಪುತ್ತೂರು ನಗರ ಸೇರಿದಂತೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸರಕಾರಿ ಜಾಗದಲ್ಲಿ ಮತ್ತು ರಸ್ತೆ ಬದಿಗಳಲ್ಲಿರುವ ಮಾವಿನ ಮರಗಳಿಂದ ಮಾವಿನ ಮಿಡಿ ಕೊಯ್ಯುವ ಏಲಂ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. ಪ್ರತೀ ಬಾರಿ ಬೇಸಗೆಯಲ್ಲಿ ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ಅಧೀನದಲ್ಲಿ ಏಲಂ ಪ್ರಕ್ರಿಯೆ ನಡೆಯುತ್ತಿದ್ದು ಕಾಟು ಮಾವಿನ ಕಾಯಿಯ ಕೊರತೆಯ ಹಿನ್ನೆಲೆಯಲ್ಲಿ ಮಾವಿನ ಮಿಡಿಯನ್ನು ಉಳಿಸುವ ನಿಟ್ಟಿನಲ್ಲಿ ಏಲಂ ರದ್ದುಗೊಳಿಸಲಾಗಿದೆ.
ಕಳೆದ ವಾರಗಳ ಹಿಂದೆ ಮಾವಿನ ಮಿಡಿ ಕೊಯ್ಯದಂತೆ ತಡೆ ನೀಡಬೇಕು ಎಂದು ಸಂಬಂಧಿಸಿದ ಇಲಾಖೆಗೆ ಮತ್ತು ಅಧಿಕಾರಿಗಳಿಗೆ ಶಾಸಕರು ಸೂಚನೆಯನ್ನು ನೀಡಿದ್ದರು. ಈಗಾಗಲೇ ರಸ್ತೆ ಅಗಲೀಕರಣಕ್ಕಾಗಿ ರಸ್ತೆ ಬದಿಯಲ್ಲಿರುವ ಬಹುತೇಕ ಮಾವಿನ ಮರಗಳನ್ನು ನಾಶ ಮಾಡಲಾಗಿದೆ. ಕಾಟು ಮಾವು ನೋಡುವುದೇ ಅಪರೂಪ ಎಂಬಂತಾಗಿದ್ದು ಯಾವುದೇ ಕಾರಣಕ್ಕೂ ಮಿಡಿ ಮಾವನ್ನು ಕೊಯ್ಯದಂತೆ ತಡೆ ನೀಡಿ ಎಂದು ಶಾಸಕರು ಸೂಚನೆಯನ್ನುಯ ನೀಡಿದ್ದರು. ಅದರೆ ಏಲಂ ರದ್ದುಮಾಡಿರಲಿಲ್ಲ. ಎ. ೧ ರಂದು ಏಲಂ ಪ್ರಕ್ರಿಯೆಯನ್ನು ರದ್ದುಮಾಡಲಾಗಿದೆ.
ಪೊಲೀಸರ ದಾಳಿ
ಇಲ್ಲಿನ ಕೊಟೆಚಾ ಹಾಲ್ ಬಳಿ ಮಧ್ಯಾಹ್ನ ಮಾವಿನ ಮಿಡಿ ಕೊಯ್ಯುವ ಬಗ್ಗೆ ಸ್ಥಳೀಯರಿಂದ ಶಾಸಕರಿಗೆ ಮೊಬೈಲ್ ಕರೆ ಬಂದಿದ್ದು ತಕ್ಷಣ ನುಗರಸಭಾ ಆಯುಕ್ತರಿಗೆ ಕರೆ ಮಾಡಿ ಕೊಯ್ಯುವುದನ್ನು ನಿಲ್ಲಿಸುವ|ಂತೆ ಸೂಚನೆಯನ್ನು ನೀಡಿದ್ದಾರೆ. ಆ ಬಳಿಕ ಪೊಲೀಸರು ಸ್ಥಳಕ್ಕೆ ತೆರಳಿ ಮಾವಿನ ಮಿಡಿ ಕೊಯ್ಯುವುದಕ್ಕೆ ಬ್ರೇಕ್ ಹಾಕಿದ್ದಾರೆ.
ಪೊಲೀಸರಿಗೆ ಕರೆ ಮಾಡಿ
ರಸ್ತೆ ಬದಿಯಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿರುವ ಕಾಟು ಮಾವಿನ ಮರದಿಂದ ಯಾರಾದರೂ ಮಿಡಿ ಕೊಯ್ಯುವುದನ್ನು ಕಂಡಲ್ಲಿ ನಗರಸಭಾ ವ್ಯಾಪ್ತಿಯವರು ನಗರಸಭಾ ಆಯುಕ್ತರಿಗೆ ತಿಳಿಸಬೇಕು ಮತ್ತು ಗ್ರಾಮಾಂತರ ಭಾಗದಲ್ಲಿ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಬೇಕು ನಿಮ್ಮ ಕರೆಗೆ ತಕ್ಷಣ ಸ್ಪಂದಿಸುವ ಕೆಲಸವನ್ನು ಪೊಲೀಸರು ಮಾಡಲಿದ್ದಾರೆ.
ಹಣ್ಣಾಗಲಿ ತಿನ್ನುವ
ಕಾಟು ಮಾವು ಬೆಳೆದು ಹಣ್ಣಾಗಲಿ ನಾವು ತಿನ್ನುವ ಜೊತೆಗೆ ಒಂದಷ್ಟು ಹಕ್ಕಿಗಳಿಗೂ ಆಹಾರವಾಗುತ್ತದೆ. ಎಲ್ಲವನ್ನೂ ನಾವೇ ತಿಂದು ಮುಗಿಸಿದರೆ ಪಾಪ ಪ್ರಾಣಿ, ಪಕ್ಷಿಗಳು ಎಲ್ಲಿಗೆ ಹೋಗುವುದು? ರಸ್ತೆ ಬದಿಯಲ್ಲಿರುವ ಕಾಟು ಮಾವು ಹಾಗೇ ಇರಲಿ. ಹಣ್ಣಾದ ಬಳಿಕ ಎಲ್ಲರೂ ಒಟ್ಟಾಗಿ ತಿನ್ನುವ . ಈ ವಿಚಾರದಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡುತ್ತಿದ್ದೇನೆ.
ಅಶೋಕ್ ರೈ ಶಾಸಕರು, ಪುತ್ತೂರು