ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ,ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವರು ಭಾಗಿಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಇಂದಿನ ಕಾರ್ಯಕ್ರಮ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚಿಣ್ಣರ ಲೋಕ ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಎ.ವಿ.ಜಿ. ಬೇಸಿಗೆ ಶಿಬಿರ 2024 ಸಮಾರೋಪ ಸಮಾರಂಭ "ಮಕ್ಕಳ ರಾಜ್ಯ" ನಾಟಕ ಪ್ರದರ್ಶನ ಎವಿಜಿ ವಿದ್ಯಾಸಂಸ್ಥೆ ಪುತ್ತೂರಿನ ಕೆವಿಜಿ ಆಗಬೇಕು : ಜಯಪ್ರಕಾಶ್ ಬದಿನಾರ್Published
3 months agoon
By
Akkare Newsಎಪ್ರಿಲ್ 14 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿಯವರು ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಂಗಳೂರಿನಲ್ಲಿ ರೋಡ್ ಶೋ ಆರಂಭಿಸಲಿದ್ದಾರೆ. ಅದಕ್ಕೂ ಮುನ್ನ ನಾರಾಯಣ ಗುರುಗಳ ಬಗೆಗಿನ ನರೇಂದ್ರ ಮೋದಿಯವರ ನಿಲುವನ್ನು ಸ್ಪಷ್ಟಪಡಿಸಬೇಕು.
2022 ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಪ್ರಸ್ತುತಪಡಿಸಲು ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ಪ್ರಸ್ತಾಪವನ್ನು ಕಳಿಸಿತ್ತು. ಆದರೆ ಕೇಂದ್ರ ಸರ್ಕಾರವು ನಾರಾಯಣ ಗುರುಗಳ ಸ್ಥಬ್ದ ಚಿತ್ರವನ್ನು ಪೆರೇಡ್ ನಿಂದ ಹೊರ ಹಾಕಿತ್ತು.
“ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು” ಎಂಬುವುದು ಬ್ರಹ್ಮಶ್ರೀ ನಾರಾಯಣ ಗುರುಗಳು ಸಾರಿದ ತತ್ವವಾಗಿದೆ. ನಾರಾಯಣ ಗುರುಗಳು ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿನ ವಿರುದ್ಧ ಹೋರಾಟ ನಡೆಸಿದವರು. ಕೇರಳದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ಈಳವ ಸಮುದಾಯದಲ್ಲಿ ಹುಟ್ಟಿದ ನಾರಾಯಣ ಗುರುಗಳು ಸಮಾಜದ ಸುಧಾರಕರಾಗಿ ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ಇಡೀ ಜೀವನವನ್ನು ಮುಡಿಪಾಗಿಟ್ಟರು. ನಾರಾಯಣ ಗುರುಗಳು ಮಂಗಳೂರಿಗೂ ಆಗಮಿಸಿ ಮಂಗಳೂರಿನಲ್ಲೂ ಅಸ್ಪೃಶ್ಯತೆಯ ವಿರುದ್ಧ ಕ್ರಾಂತಿ ಮಾಡಿದರು.
ಕೇರಳದ ಈಳವರಂತೆ ಮಂಗಳೂರಿನ ಬಿಲ್ಲವ ಸಮುದಾಯ ಕೂಡಾ ನಾರಾಯಣ ಗುರುಗಳನ್ನು ಸಂತರನ್ನಾಗಿ ಸ್ವೀಕರಿಸಿ ಮನೆ ಮನದಲ್ಲಿ ಪೂಜಿಸುತ್ತಿದೆ. ಬಿಲ್ಲವರ ಸ್ವಾಭಿಮಾನಿ ಚಳವಳಿಯ ಭಾಗವಾಗಿಯೇ ಬಿಲ್ಲವರಿಂದಲೇ ಪೂಜೆಗೊಳಪಡುವ ಕುದ್ರೋಳಿ ಗೋಕರ್ಣನಾಥ ದೇವಸ್ಥಾನವನ್ನು ನಾರಾಯಣ ಗುರುಗಳು ಸ್ಥಾಪಿಸಿದರು. ಈಗ ಇಡೀ ಕರಾವಳಿಯಲ್ಲಿ ಬಿಲ್ಲವರೇ ಬಹುಸಂಖ್ಯಾತರು. ಇಂತಹ ಸಮುದಾಯದ ಗುರುಗಳ ಸ್ಥಬ್ದ ಚಿತ್ರವನ್ನು ಗಣರಾಜ್ಯೋತ್ಸವದ ಪೆರೇಡ್ ನಿಂದ ಹೊರ ಹಾಕಿ ಶಂಕರಾಚಾರ್ಯರ ಸ್ಥಬ್ದ ಚಿತ್ರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಧ್ಯತೆ ಮತ್ತು ವಿರೋಧವನ್ನು ಸಾರುತ್ತದೆ.
ನರೇಂದ್ರ ಮೋದಿ ನೇತೃತ್ವದಲ್ಲೇ ಕರ್ನಾಟಕದಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರವಿತ್ತು. ಕರ್ನಾಟಕದಲ್ಲಿರುವುದು ಡಬಲ್ ಇಂಜಿನ್ ಸರ್ಕಾರ ಎಂದು ಖುದ್ದು ಪ್ರಧಾನಿ ಮೋದಿಯವರೇ ಹೇಳಿದ್ದರು. ಅಂತಹ ಸರ್ಕಾರದಲ್ಲಿ ಮಕ್ಕಳ ಶಾಲಾ ಪಠ್ಯದಿಂದ ನಾರಾಯಣ ಗುರುಗಳ ಬಗೆಗಿನ ಪಾಠವನ್ನು ಕಿತ್ತು ಹಾಕಲಾಗಿತ್ತು. ಈ ರೀತಿ ನಾರಾಯಣ ಗುರುಗಳನ್ನು ಅವಹೇಳನ ಮಾಡಿದ್ದ ಪಠ್ಯ ಪುಸ್ತಕ ಸಮಿತಿಯ ಅಧ್ಯಕ್ಷರನ್ನು ಬಿಜೆಪಿಯ ಶಾಸಕರು, ಸಂಸದರುಗಳು ಬೆಂಬಲಿಸಿದ್ದರು.
ನಾರಾಯಣ ಗುರುಗಳು ನಿಜವಾದ ಸಂತ. ಹಿಂದೂ ಧರ್ಮದೊಳಗಿನ ಅಸಮಾನತೆಯನ್ನು ಹೋಗಲಾಡಿಸುವುದರ ಜೊತೆಗೆ ಮನುಷ್ಯತ್ವದ ತತ್ವವನ್ನು ಸಾರಿದವರು. ನಾರಾಯಣ ಗುರುಗಳು ಬಿಲ್ಲವರು ವಿದ್ಯೆ-ಉದ್ಯೋಗ- ಸಂಪರ್ಕದಿಂದ ಬಲಯುತರಾಗಬೇಕು ಎಂದು ಬಯಸಿದ್ದರು. ಆದರೆ ಕರಾವಳಿಯ ಬಿಲ್ಲವ ಯುವಕರನ್ನು ಮೋದಿಯ ತಂಡ ಯಾವ ಉದ್ದೇಶಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದೆ ? ನಾರಾಯಣ ಗುರುಗಳು ಈಗ ಬದುಕಿದ್ದರೆ ತನ್ನವರನ್ನು ಸಾಯಲು ಮತ್ತು ಸಾಯಿಸಲು ಬಳಸುವ ಮೋದಿಯ ರಾಜಕೀಯದ ಬಗ್ಗೆ ಯಾವ ನಿಲುವು ತಾಳುತ್ತಿದ್ದರು. ನಾರಾಯಣ ಗುರುಗಳು ಜಾತ್ಯಾತೀತವಾದ ಸ್ಪಷ್ಟ ನಿಲುವನ್ನು ಹೊಂದಿದ್ದರು. ಆ ಕಾರಣಕ್ಕಾಗಿಯೇ ಮಹತ್ಮಾ ಗಾಂಧಿ, ಸ್ವಾಮೀ ವಿವೇಕಾನಂದರ ಒಡನಾಟ ಹೊಂದಿದ್ದರು. ಇಂತದ್ದೊಂದು ಐತಿಹಾಸಿಕ ಕಾರಣಕ್ಕಾಗಿಯೇ ಬಿಲ್ಲವರ ಕಂಕನಾಡಿ ಗರಡಿಯಲ್ಲಿ ಇಂದಿಗೂ ಗಾಂಧಿಗೆ ತ್ರಿಕಾಲ ಪೂಜೆ ನಡೆಯುತ್ತಿದೆ. ಅಂತಹ ಗಾಂಧಿಯನ್ನು ಗುಂಡಿಟ್ಟುಕೊಂದ ಗೋಡ್ಸೆಯ ಜನ್ಮದಿನವನ್ನು ಹಿಂದೂ ಮಹಾಸಭಾ ಎಂಬ ಸಂಘಟನೆ ಮಂಗಳೂರಿನಲ್ಲಿ ಆಚರಿಸುತ್ತದೆ. ಇದು ನಾರಾಯಣ ಗುರುಗಳ ಮೇಲಿನ ದಾಳಿಯೇ ಹೊರತು ಗಾಂಧಿ ಮೇಲಿನ ದಾಳಿಯಲ್ಲ.
ನಾರಾಯಣ ಗುರುಗಳು 1888 ರಲ್ಲಿ ಕೇರಳದ ಅರವಿಪುರಂನಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸಿದಾಗ ಅಲ್ಲಿ ಫಲಕವೊಂದರಲ್ಲಿ ಘೋಷಣೆಯನ್ನು ಮಲಯಾಳಂ ಭಾಷೆಯಲ್ಲಿ ಬರೆಸುತ್ತಾರೆ. ಅದರ ಕನ್ನಡ ಭಾವಾರ್ಥ ಹೀಗಿದೆ :-
ಜಾತಿ ಭೇದ ಮತ ದ್ವೇಷ
ಒಂದೂ ಇಲ್ಲದ ಸರ್ವರೂ
ಸೋದರತ್ವದಿ ಬಾಳುವ
ಮಾದರಿ ಸ್ಥಾನವು ಇದು
ನಾರಾಯಣ ಗುರುಗಳ ಈ ತತ್ವವನ್ನು ಪಾಲಿಸುವವರು ಮಾತ್ರ ನಾರಾಯಣ ಗುರುಗಳ ಅನುಯಾಯಿಗಳಾಗುತ್ತಾರೆ. ನಾರಾಯಣ ಗುರುಗಳಿಗೆ ಮಾಲಾರ್ಪಣೆ ಮಾಡುವ ನರೇಂದ್ರ ಮೋದಿಯವರು ನಾರಾಯಣ ಗುರುಗಳ ಈ ತತ್ವವನ್ನು ಪಾಲಿಸುತ್ತೇನೆ ಎಂದು ಬಹಿರಂಗವಾಗಿ ಘೋಷಿಸಿಕೊಳ್ಳುತ್ತಾರೆಯೇ ? ಹಾಗಾಗಿ ನಾರಾಯಣ ಗುರುಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಾಲಾರ್ಪಣೆ ಮಾಡುವುದಕ್ಕೂ ಮೊದಲು ಕರಾವಳಿಯಲ್ಲಿ ಬಹುಸಂಖ್ಯಾತರಾಗಿರುವ ನಾರಾಯಣ ಗುರು ಅನುಯಾಯಿಗಳ ಭಾವನೆಗಳಿಗೆ ಉತ್ತರ ಕೊಡಬೇಕು.