ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕ

Published

on

ಪುತ್ತೂರು ಮುಂದಿನ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯದ ಸಹ ಅಧ್ಯಕ್ಷರಾಗಿ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹಾಗೂ ಸಂಯೋಜಕರಾಗಿ ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ರವರನ್ನು ನೇಮಕ ಮಾಡಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆದೇಶ ಹೊರಡಿಸಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಶಕ್ತಿಯನ್ನು ಹೆಚ್ಚಿಸಲು ನೂತನ ಪದಾಧಿಕಾರಿಗಳಿಗೆ ಈ ಜವಾಬ್ದಾರಿಯನ್ನು ನೀಡಲಾಗಿದೆ.







ನೂತನ 10 ಜನ ಸಹ-ಅಧ್ಯಕ್ಷರುಗಳು, 9 ಮುಖ್ಯ ಸಂಯೋಜಕರು, 38 ಸಂಯೋಜಕರು ಹಾಗೂ ಸಂವಹನ ಮತ್ತು ಸಾಮಾಜಿಕ ಜಾಲತಾಣಕ್ಕೆ 2. ಮಾಧ್ಯಮ ಸಂಯೋಜಕರನ್ನಾಗಿ 2 ಹಾಗೂ 36 ಜಿಲ್ಲಾ ಪ್ರಚಾರ ಸಮಿತಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆಯವರು ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement