ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಊರಿನ ಸುದ್ದಿಗಳು

ಮಂಗಳೂರು : ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡದಲ್ಲಿ ಗುಡುಗು ಸಿಡಿಲಿನ ಮಳೆಯಬ್ಬರ..!

Published

on

ಮಂಗಳೂರು : ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 4 ರಿಂದ ಗುಡುಗು ಸಿಡಿಲಿನ ಸಹಿತ ಭಾರಿ ಮಳೆಯಾಗಿದೆ. ಹಿಂದೆ ಎಂದೂ ಕಂಡರಿಯದ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ ಮಳೆಯಿಂದ ಕೊಂಚ ನೆಮ್ಮದಿಯ ಉಸಿರು ಬಿಟ್ಟಿದ್ದಾರೆ.

ಸಿಡಿಲಿನ ಅಬ್ಬರಕ್ಕೆ ಕೆಲ ಸಮಯ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿತ್ತು. ಹವಾಮಾನ ಇಲಾಖೆ ಮಾಹಿತಿಯಂತೆ ಮುಂದಿನ ಮೂರು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಸಹಿತ ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಶುಕ್ರವಾರವಾರ ಜಿಲ್ಲೆಯ ಆನೇಕ ಭಾಗಗಗಳಲ್ಲಿ ಸಿಡಿಲು ಸಹಿತ ಉತ್ತಮ ಮಳೆಯಾಗಿತ್ತು.








ಸುಳ್ಯ, ಕಡಬ, ಬೆಳ್ತಂಗಡಿ ಬಂಟ್ವಾಳ, ಪುತ್ತೂರು, ಸುರತ್ಕಲ್ ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ನಿಡಿಗಲ್‌-ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ರ‌ಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದರಿಂದ, ಕೆಸರುಮಯ ರಸ್ತೆಯಲ್ಲೇ ಜನ ವಾಹನ ಓಡಾಡಬೇಕಾಯಿತು.

ಶುಕ್ರವಾರ ಸಂಜೆ ಬೀಸಿದ ಗಾಳಿ ಮಳೆಗೆ ಕನಕಮಜಲಿನಲ್ಲಿ ರಸ್ತೆಗೆ ಮರ, ವಿದ್ಯುತ್‌ ಕಂಬ ಉರುಳಿ ಸಂಚಾರಕ್ಕೆ ತಡೆ ಉಂಟಾಯಿತು. ಮಂಗಳೂರು, ಉಳ್ಳಾಲ, ಮಲ್ಪೆ, ಗಂಗೊಳ್ಳಿ, ಭಟ್ಕಳ, ಹೊನ್ನಾವರ, ಕಾರವಾರ ಕಡಲ ತೀರದ ಪ್ರದೇಶಗಳಲ್ಲಿ ಅಲೆಗಳ ಅಬ್ಬರ ತುಸು ಜೋರಾಗಿಯೇ ಇದ್ದು ಕಡಲ ತೀರಕ್ಕೆ ಹೋಗುವ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕೋರಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement