ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಹಿಂದೂ ಧರ್ಮದ ಸಾಮರಸ್ಯವೇ ನಮ್ಮ ಧ್ಯೇಯ ಬೈಕಂಪಾಡಿಯಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ,ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವರು ಭಾಗಿಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣಅಭಿಪ್ರಾಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ತಾಜಾ ಸುದ್ದಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಚುನಾವಣಾ ಸಂದರ್ಭದಲ್ಲಿ ನಿರಂತರವಾಗಿ ಗ್ಯಾರಂಟಿ ಯೋಜನೆ ಯಲ್ಲಿ ಮನೆಯ ಹೆಣ್ಣುಮಕ್ಕಳು ದಾರಿ ತಪ್ಪುವ ಆರೋಪ ಕುಮಾರಸ್ವಾಮಿ ಆರೋಪಕ್ಕೆ ಲೇವಡಿ ಮಾಡಿದ : ರಕ್ಷಿತ್ ಶಿವರಾಂಇಂದಿನ ಕಾರ್ಯಕ್ರಮ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚಿಣ್ಣರ ಲೋಕ ಜೀವನಶೈಲಿ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಎ.ವಿ.ಜಿ. ಬೇಸಿಗೆ ಶಿಬಿರ 2024 ಸಮಾರೋಪ ಸಮಾರಂಭ "ಮಕ್ಕಳ ರಾಜ್ಯ" ನಾಟಕ ಪ್ರದರ್ಶನ ಎವಿಜಿ ವಿದ್ಯಾಸಂಸ್ಥೆ ಪುತ್ತೂರಿನ ಕೆವಿಜಿ ಆಗಬೇಕು : ಜಯಪ್ರಕಾಶ್ ಬದಿನಾರ್Published
3 months agoon
By
Akkare Newsಮಂಗಳೂರು: ತಾನು ಹಿಂದೂ. ಹಿಂದೂ ಧರ್ಮದ ಆಚಾರ – ವಿಚಾರಗಳನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೇನೆ. ಇಂತಹ ಹಿಂದೂ ಧರ್ಮ, ಸಾಮರಸ್ಯದ ಬದುಕನ್ನು ತನಗೆ ಹೇಳಿಕೊಟ್ಟಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.
ಸುರತ್ಕಲ್ ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೈಕಂಪಾಡಿ ಎಪಿಎಂಸಿ ಮುಂಭಾಗ ಮಂಗಳವಾರ ಸಂಜೆ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ತುಳುನಾಡಿನ ಸಂಸ್ಕೃತಿ, ಗ್ರಾಮೀಣ ಸೊಗಡಿನ ಆಟಗಳು ಇವುಗಳ ಜೊತೆಗೆ ಈ ತುಳುನಾಡಿನಲ್ಲಿ ಮೆಡಿಕಲ್ ಹಬ್, ಶಿಕ್ಷಣ ಹಬ್ ಮಾಡಲು ಸಾಧ್ಯ. ಪ್ರವಾಸೋದ್ಯಮ ಬೆಳೆಸಲು ವಿಫುಲ ಅವಕಾಶಗಳಿವೆ. ಇದರಿಂದ ಉದ್ಯೋಗ ಸೃಷ್ಟಿ, ಜಿಲ್ಲೆಯ ಅಭಿವೃದ್ಧಿ ಸಾಧ್ಯ. ಯುವಕರು ನಮ್ಮೂರಲ್ಲೇ ಉದ್ಯೋಗ ಪಡೆಯಲು ಸಾಧ್ಯ. ಮಕ್ಕಳ ಇರುವಿಕೆಯಲ್ಲಿ ಕಾಯುತ್ತಿರುವ ಪೋಷಕರು ನೆಮ್ಮದಿಯ ನಿಟ್ಟುಸಿರು ಬಿಡಬಹುದು. ಹೀಗೆ ಅಭಿವೃದ್ಧಿಯ ಜೊತೆ ಹೆತ್ತವರ ಕನಸೂ ಈಡೇರಲಿದೆ. ಮನೆ ಮನೆಗಳು ಗಟ್ಟಿಯಾದರೆ, ದೇಶ ಸಮೃದ್ಧವಾಗಲಿದೆ ಎಂದರು.
ಕಾಂಗ್ರೆಸ್ ಗೆಲ್ಲುವುದು ನಿಶ್ಚಯವಾಗುತ್ತಿದ್ದಂತೆ ಅಪಪ್ರಚಾರದ ಕೆಲಸ ನಡೆಯುತ್ತಿದೆ. ಇದಕ್ಕೆ ಕಿವಿಕೊಡಬೇಡಿ. ನೀವು ತಲೆತಗ್ಗಿಸುವ ಕೆಲಸವನ್ನು ತಾನೆಂದೂ ಮಾಡುವುದಿಲ್ಲ. ನೀವು ಪಟ್ಟ ಶ್ರಮ ವ್ಯರ್ಥವಾಗಬಾರದು. ಆದ್ದರಿಂದ ಮುಂದಿರುವ ಕೆಲವು ಗಂಟೆಗಳಷ್ಟು ಸಮಯ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಿ. ತುಳುನಾಡಿನ ಸಾಮರಸ್ಯದ ಗತವೈಭವ ಮರುಕಳಿಸಲಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಬೈಕಂಪಾಡಿಯಲ್ಲಿ ನಡೆದಿರುವ ಪ್ರಚಾರ ಸಭೆ ಕಾಂಗ್ರೆಸ್ ಗೆಲುವಿನ ದಿಕ್ಸೂಚಿ. ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲುವ ಸೂಚನೆ ಸಿಕ್ಕಿದೆ. ದಕ್ಷಿಣ ಕನ್ನಡದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರಾಮಾಣಿಕ, ಸಮರ್ಥ ಅಭ್ಯರ್ಥಿ. ಯಾವುದೇ ಕಳಂಕ ರಹಿತ ವ್ಯಕ್ತಿತ್ವ ಅವರದ್ದು. ಮತದಾನದ ಕೊನೆಕ್ಷಣದವರೆಗೂ ಕೆಲಸ ಮಾಡಿ, ಶ್ರಮಿಸಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಗೆಲ್ಲಿಸಿ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮಾತನಾಡಿ, ರಾಜ್ಯದಲ್ಲಿ ೬ ಕೋಟಿಗೂ ಅಧಿಕ ಮಂದಿಗೆ ಕಾಂಗ್ರೆಸ್ ಸರಕಾರ ಗ್ಯಾರೆಂಟಿ ಯೋಜನೆಯನ್ನು ನೀಡಿದೆ. ಇದಲ್ಲದೇ ಅನೇಕ ಅಭಿವೃದ್ಧಿ ಸಾಧನೆಯನ್ನು ಕಾಂಗ್ರೆಸ್ ಮಾಡಿದೆ. ಆದರೆ ಯಾವ ಅಭಿವೃದ್ಧಿ ಸಾಧನೆಯನ್ನು ಮಾಡದ ಬಿಜೆಪಿ, ರಾಜ್ಯದಲ್ಲಿ ಯಾವ ರೀತಿ ಮತ ಕೇಳುತ್ತಾರೆ. ಕಾಂಗ್ರೆಸಿಗರಿಗೆ ಇದರ ಭಯ ಇಲ್ಲ. ಧೈರ್ಯವಾಗಿ ಜನರ ಬಳಿ ಹೋಗಿ ಮತ ಕೇಳಬಹುದು. ಜನರೂ ಕಾಂಗ್ರೆಸ್ ಕಾರ್ಯಕರ್ತರನ್ನು ಸ್ವಾಗತಿಸುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾತನಾಡಿ, ಇಷ್ಟು ದಿನ ಕಾಂಗ್ರೆಸ್ ಗೆಲುವಿಗಾಗಿ ಮಾಡಿರುವ ನಮ್ಮ ಶ್ರಮ ವ್ಯರ್ಥವಾಗುವುದಿಲ್ಲ. ಪದ್ಮರಾಜ್ ಆರ್. ಪೂಜಾರಿ ಅವರು ಈ ಬಾರಿ ಗೆದ್ದು, ಜಿಲ್ಲೆಯ ಅಭಿವೃದ್ಧಿಗೆ ಮುನ್ನುಡಿ ಬರೆಯಲಿದ್ದಾರೆ ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಮೇಯರ್ ಮಹಾಬಲ, ಎಂ.ಜಿ. ಹೆಗ್ಡೆ, ಯುವ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಆಳ್ವ, ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜಾ, ಕೆಪಿಸಿಸಿ ಸದಸ್ಯ ಪೃಥ್ವಿರಾಜ್, ರಾಜೀವ್ ಗಾಂಧಿ ವೈದ್ಯಕೀಯ ವಿವಿ ಸಿಂಡಿಕೇಟ್ ಸದಸ್ಯ ಡಾ. ಇಫ್ತಿಕರ್, ಸುರೇಂದ್ರ ಕಂಬ್ಳಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ಯಾಲೆಟ್ ಪಿಂಟೋ, ಜಯಲಕ್ಷ್ಮೀ ಪೂಜಾರಿ, ಪ್ರತಿಭಾ ಕುಳಾಯಿ, ಪದ್ಮನಾಭ ಕೋಟ್ಯಾನ್, ಜಯಶೀಲ ಅಡ್ಯಂತಾಯ, ಪುರುಷೋತ್ತಮ ಚಿತ್ರಾಪುರ ಮೊದಲಾದವರು ಉಪಸ್ಥಿತರಿದ್ದರು.
ಬೃಹತ್ ರೋಡ್ ಶೋ:
ಪ್ರಚಾರ ಸಭೆಗೆ ಮೊದಲು ಕುಳಾಯಿಯಿಂದ ಬೈಕಂಪಾಡಿಯವರೆಗೆ ಬೃಹತ್ ರೋಡ್ ಶೋ ನಡೆಯಿತು. ಅಭ್ಯರ್ಥಿ, ಮುಖಂಡರು ತೆರೆದ ವಾಹನದಲ್ಲಿ ಸಾಗಿದರೆ, ಬೃಹತ್ ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು, ಮತದಾರರು ಕಾಲ್ನಡಿಗೆಯಲ್ಲಿ ಘೋಷಣೆ ಕೂಗುತ್ತಾ, ಗ್ಯಾರೆಂಟಿ ಯೋಜನೆಯ ಫಲಕ ಪ್ರದರ್ಶಿಸುತ್ತಾ ಸಾಗಿದರು. ರೋಡ್ ಶೋಗೆ ಚೆಂಡೆ, ನಾಸಿಕ್ ಬ್ಯಾಂಡ್, ಹುಲಿ ಕುಣಿತ ರಂಗು ತುಂಬಿತು. ಬೈಕಂಪಾಡಿ ಬಳಿ ಬೃಹತ್ ಹೂಮಾಲೆಯನ್ನು ಅಭ್ಯರ್ಥಿಗೆ ಹಾಕಲಾಯಿತು.