Published
2 years agoon
By
Akkare News
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ 20 ಸಾವಿರ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ : ಸಂಜೀವ ಪೂಜಾರಿ ಕುರೆಮಜಲು ಮಾಜಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಮುಂಡೂರು
ಮೇ : 01.ಸುಡು ಬಿಸಿಲನ್ನು ಲೆಕ್ಕಿಸದೆ ಶಾಂತಿಯುತವಾಗಿ ಮತದಾನ ಮಾಡಿದ ಮತದಾರರಿಗೂ ಕಾರ್ಯಕರ್ತರಿಗೂ ಕೃತಜ್ಞತೆಗಳು. ಗ್ಯಾರೆಂಟಿ ಯೋಜನೆಗಳು ಜನಸಾಮನ್ಯರ ಬದುಕಿಗೆ ವರದಾನವಾಗಿದ್ದು, ಈ ಬಾರಿ ಜನರು ಬದಲಾವಣೆಯನ್ನು ಬಯಸಿ, ಗತ ಕಾಲದ ವೈಭವವನ್ನು ಮರಳಿ ಪಡೆಯಲು ಕಾಂಗ್ರೆಸನ್ನು ನೆಚ್ಚಿಕೊಂಡ ಪರಿಣಾಮವಾಗಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಪ್ರಚಂಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ.


ಅದರಲ್ಲಿ ವಿಶೇಷವಾಗಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಅವರ ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರೊಂದಿಗೆ ಒಡನಾಟ ಮತ್ತು ಅಭಿವೃದ್ಧಿಯ ಬಗ್ಗೆ ಚಿಂತನೆ ವಿಧಾನಸಭಾ ಕ್ಷೇತ್ರದಲ್ಲಿ ಇರುವ ಎಲ್ಲಾ ಅಭಿವೃದ್ಧಿ ಪಂಚಾಯಿತಿಗಳಿಗೆ ವಿಶೇಷ ಅನುದಾನ ನೀಡಿ ಅಭಿವೃದ್ಧಿ .ಇವೆಲ್ಲವೂ ಲೋಕಸಭಾ ಚುನಾವಣೆ ಗೆಲುವಿಗೆ ಸಹಕಾರಿಯಾಗಲಿದೆ




